ಗ್ಯಾಂಗ್ಟಾಕ್, 29 ಮೇ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಇಂದು ಸಿಕ್ಕಿಂ ರಾಜ್ಯ ರಚನೆಯ ಸುವರ್ಣ ಮಹೋತ್ಸವದ ಅಂಗವಾಗಿ ರಾಜಧಾನಿ ಗ್ಯಾಂಗ್ಟಾಕ್ನಲ್ಲಿ ನಡೆಯುವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಈ ಸಂದರ್ಭ 750 ಕೋಟಿ ರೂ. ವೆಚ್ಚದ 500 ಹಾಸಿಗೆಗಳ ನಾಮ್ಚಿ ಜಿಲ್ಲಾ ಆಸ್ಪತ್ರೆ, ಪೆಲ್ಲಿಂಗ್ನಲ್ಲಿ ಪ್ರವಾಸೋದ್ಯಮ ಉದ್ದೇಶದ ರೋಪ್ವೇ, ಮತ್ತು ಅಟಲ್ ಅಮೃತ್ ಉದ್ಯಾನದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಪ್ರತಿಮೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.
ಇದೆ ಸಂದರ್ಭದಲ್ಲಿ ಸಿಕ್ಕಿಂ ರಾಜ್ಯದ 50ನೇ ವಾರ್ಷಿಕೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಚೀಟಿ ಹಾಗೂ ಸ್ಮಾರಕ ನಾಣ್ಯವನ್ನೂ ಬಿಡುಗಡೆ ಮಾಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa