ದಾವಣಗೆರೆ, 29 ಮೇ (ಹಿ.ಸ.) :
ಆ್ಯಂಕರ್ : ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2006-07ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ ಬಾಂಡ್ ಪಡೆದ ಫಲಾನುಭವಿಗಳಿಗೆ ಪರಿಪಕ್ವ ಮೊತ್ತ ಪಾವತಿಸಲು ಪ್ರಸ್ತಾವನೆ ಸಲ್ಲಿಸಬಹುದು.
2006-07ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಬಾಂಡ್ ಪಡೆದ ಫಲಾನುಭವಿಗಳು ತಮ್ಮ ಹತ್ತಿರದ ಅಂಗನವಾಡಿ ಕೇಂದ್ರ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ನಂದಗೋಕುಲ ಬಿಲ್ಡಿಂಗ್, ದುರ್ಗಾಂಬಿಕಾ ಸ್ಕೂಲ್ ಎದುರು ದಾವಣಗೆರೆ ದೂ.ಸಂ: 08192-263219 ಇಲ್ಲಿಗೆ ಅಗತ್ಯ ದಾಖಲಾತಿಗಳೊಂದಿಗೆ ಮೂಲ ಭಾಗ್ಯಲಕ್ಷ್ಮಿ ಬಾಂಡ್, ಬ್ಯಾಂಕ್ ಖಾತೆಯ ಪಾಸ್ ಪುಸ್ತಕ, ಬಿಪಿಎಲ್ ರೇಷನ್ ಕಾರ್ಡ್, ವ್ಯಾಸಂಗ ಪ್ರಮಾಣ ಪತ್ರ, ತಂದೆ, ತಾಯಿ ಮಗುವಿನ ಆಧಾರ್ ಕಾರ್ಡ್ ಜನನ ಪ್ರಮಾಣ ಪತ್ರ ಸಲ್ಲಿಸಬೇಕೆಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa