ನವದೆಹಲಿ, 29 ಮೇ (ಹಿ.ಸ.) :
ಆ್ಯಂಕರ್ : ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರು ಇಂದು ದಿವಂಗತ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಸ್ಮಾರಕ ಕಿಸಾನ್ ಘಾಟ್ಗೆ ಭೇಟಿ ನೀಡಿ ಪುಷ್ಪಾರ್ಚನೆ ಮೂಲಕ ಗೌರವ ಸಲ್ಲಿಸಿದರು.
ಈ ಸಂದರ್ಭ ಅವರು ಮಾತನಾಡಿ, ಚರಣ್ ಸಿಂಗ್ ರೈತ ಹಿತಾಸಕ್ತಿಗೆ ಶ್ರದ್ಧೆಯಿಂದ ಸೇವೆ ಸಲ್ಲಿಸಿದ ನಾಯಕರಾಗಿದ್ದು, ಭೂ ಮಾಲೀಕತ್ವ ಹಕ್ಕು ನೀಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು ಎಂದು ಹೇಳಿದರು. ರೈತರು ಕೃಷಿಯ ಜೊತೆಗೆ ಪಶುಸಂಗೋಪನೆಗೆ ಕೂಡ ತೊಡಗಬೇಕು ಎಂದು ಉಪ ರಾಷ್ಟ್ರಪತಿ ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa