ವಿಜಯನಗರ : ಶೇ.86 ರಷ್ಟು ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಪೂರ್ಣ
ಹೊಸಪೇಟೆ, 29 ಮೇ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಈಗಾಗಲೇ ನಡೆಯುತ್ತಿರುವ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯಲ್ಲಿ ಆಯಾ ನಗರ, ತಾಲೂಕು ಮತ್ತು ಗ್ರಾಮಗಳಿಂದ ಕೆಲಸಕ್ಕಾಗಿ ಬೇರೆಡೆ ವಲಸೆ ಹೋಗಿರುವ ಪರಿಶಿಷ್ಟ ಕುಟುಂಬಗಳ ಮಾಹಿತಿಯನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.
ವಿಜಯನಗರ : ಶೇ.86 ರಷ್ಟು ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಪೂರ್ಣ


ಹೊಸಪೇಟೆ, 29 ಮೇ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಈಗಾಗಲೇ ನಡೆಯುತ್ತಿರುವ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯಲ್ಲಿ ಆಯಾ ನಗರ, ತಾಲೂಕು ಮತ್ತು ಗ್ರಾಮಗಳಿಂದ ಕೆಲಸಕ್ಕಾಗಿ ಬೇರೆಡೆ ವಲಸೆ ಹೋಗಿರುವ ಪರಿಶಿಷ್ಟ ಕುಟುಂಬಗಳ ಮಾಹಿತಿಯನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಕುರಿತಂತೆ ಸಮುದಾಯದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಗುರುವಾರ ಅವರು ಮಾತನಾಡಿದರು.

ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಕೆಲವೆಡೆ ಉದ್ಯೋಗಕ್ಕಾಗಿ ಬೇರೆಡೆ ವಲಸೆ ಮತ್ತು ಇನ್ನಿತರ ಕಾರಣಗಳಿಂದ ಹೋಗಿರುವ ಕುಟುಂಬಗಳನ್ನು ಹೊರತು ಪಡಿಸಿ ಶೇ.86 ರಷ್ಟು ಸರ್ವೇ ಕಾರ್ಯ ಮುಗಿದ್ದಿದ್ದು. ಇನ್ನೂ ಶೇ.14 ರಷ್ಟು ಮಾತ್ರ ಸಮೀಕ್ಷೆ ಬಾಕಿ ಇದೆ.

ಜಿಲ್ಲೆಯಲ್ಲಿ 2011 ಜನಗಣತಿ ಪ್ರಕಾರ ಪರಿಶಿಷ್ಟ ಜಾತಿ ಜನಾಂಗದವರು 3,24,306 ಸಂಖ್ಯೆಯಲ್ಲಿ ಇದ್ದು. ಇದರ ಅನ್ವಯ ಜಿಲ್ಲೆಯಲ್ಲಿ 2025 ಕ್ಕೆ ಸುಮಾರು 3,95,866 ಅಂದಾಜಿಸಲಾಗಿದೆ. ಈವರೆಗೆ 3,39,549 ಪರಿಶಿಷ್ಟ ಜಾತಿ ಜನಾಂಗದವರನ್ನು ಸರ್ವೇ ಮಾಡಲಾಗಿದೆ. ಮತ್ತು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯಲ್ಲಿ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರದಲ್ಲಿ ಮೇ.30 ರಿಂದ ಜೂ.1ರ ವರಗೆ ಮತ್ತು ಆನ್‍ಲೈನ್ ಮೂಲಕ ಸ್ವಯಂ ಘೋಷಣೆಗೆ ಜೂ.1 ರ ವರಗೆ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇದನ್ನು ಹೊರತುಪಡಿಸಿ ಜಿಲ್ಲೆಯಲ್ಲಿರುವ ವಲಸಿಗರು ಆದಷ್ಟು ಬೇಗ ಸಮೀಕ್ಷೆಯಲ್ಲಿ ಸ್ವಯಂಧೃಡೀಕರಿಸಿಕೊಳ್ಳಬೇಕು.

ಸಮುದಾಯದ ಮುಖಂಡರು ಸಹಕರಿಸಬೇಕು. ಒಂದು ವೇಳೆ ವಲಸಿಗರು ಬರಲು ಸಾಧ್ಯವಾಗದಿದ್ದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳನ್ನು ಒದಗಿಸಬೇಕೆಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande