ಪಾಕಿಸ್ತಾನಕ್ಕೆ ಬೇಹುಗಾರಿಕೆ ನಡೆಸುತ್ತಿದ್ದ ಯುವಕನ ಬಂಧನ
ಧರ್ಮಶಾಲಾ, 29 ಮೇ (ಹಿ.ಸ.) : ಆ್ಯಂಕರ್ : ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಡೆಹ್ರಾದಲ್ಲಿ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಸುಖಹರ್ ಗ್ರಾಮದ ಯುವಕ ಅಭಿಷೇಕ್ ಭಾರದ್ವಾಜ್ (20) ನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಮೊಬೈಲ್‌ನಲ್ಲಿ ಸೂಕ್ಷ್ಮ ಮಾಹಿತಿಯು ಪತ್ತೆಯಾಗಿದ್ದು, ಡೇಟಾವನ್ನು
Arrest


ಧರ್ಮಶಾಲಾ, 29 ಮೇ (ಹಿ.ಸ.) :

ಆ್ಯಂಕರ್ : ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಡೆಹ್ರಾದಲ್ಲಿ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಸುಖಹರ್ ಗ್ರಾಮದ ಯುವಕ ಅಭಿಷೇಕ್ ಭಾರದ್ವಾಜ್ (20) ನನ್ನು ಪೊಲೀಸರು ಬಂಧಿಸಿದ್ದಾರೆ.

ಆತನ ಮೊಬೈಲ್‌ನಲ್ಲಿ ಸೂಕ್ಷ್ಮ ಮಾಹಿತಿಯು ಪತ್ತೆಯಾಗಿದ್ದು, ಡೇಟಾವನ್ನು ಫೋರೆನ್ಸಿಕ್ ಪರೀಕ್ಷೆಗೆ ಕಳುಹಿಸಲಾಗಿದೆ. ಆಪರೇಷನ್ ಸಿಂಧೂರ್ ನಂತರ ಅನುಮಾನಾಸ್ಪದ ಚಟುವಟಿಕೆಗಳ ಹಿನ್ನೆಲೆಯಲ್ಲಿ ನಿಗಾ ಇಡಲಾಗಿತ್ತು.

ಅಭಿಷೇಕ್ ಸಾಮಾಜಿಕ ಮಾಧ್ಯಮಗಳ ಮೂಲಕ ಪಾಕಿಸ್ತಾನಕ್ಕೆ ಮಾಹಿತಿ ಕಳಿಸುತ್ತಿದ್ದನು ಎನ್ನಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 152 ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande