ಹಾನಿಗೊಳಗಾದ ಪ್ರದೇಶಗಳಿಗೆ ಶೀಘ್ರದಲ್ಲಿ ಕೇಂದ್ರದಿಂದ ಪರಿಹಾರ : ಅಮಿತ್ ಶಾ
ಪೂಂಚ್, 30 ಮೇ (ಹಿ.ಸ.) : ಆ್ಯಂಕರ್ : ಪಾಕಿಸ್ತಾನದಿಂದ ನಡೆದ ಶೆಲ್ ದಾಳಿಯಲ್ಲಿ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮನೆಗಳು, ಅಂಗಡಿಗಳು ಮತ್ತು ಧಾರ್ಮಿಕ ಸ್ಥಳಗಳಿಗೆ ಹಾನಿಯಾಗಿದ್ದು, ಕೇಂದ್ರ ಸರ್ಕಾರ ಶೀಘ್ರದಲ್ಲೇ ಪರಿಹಾರ ಪ್ಯಾಕೇಜ್ ಘೋಷಿಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಶಾ ಪೂಂಚ್‌
Amita  sha


ಪೂಂಚ್, 30 ಮೇ (ಹಿ.ಸ.) :

ಆ್ಯಂಕರ್ : ಪಾಕಿಸ್ತಾನದಿಂದ ನಡೆದ ಶೆಲ್ ದಾಳಿಯಲ್ಲಿ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮನೆಗಳು, ಅಂಗಡಿಗಳು ಮತ್ತು ಧಾರ್ಮಿಕ ಸ್ಥಳಗಳಿಗೆ ಹಾನಿಯಾಗಿದ್ದು, ಕೇಂದ್ರ ಸರ್ಕಾರ ಶೀಘ್ರದಲ್ಲೇ ಪರಿಹಾರ ಪ್ಯಾಕೇಜ್ ಘೋಷಿಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಶಾ ಪೂಂಚ್‌ಗೆ ಭೇಟಿ ನೀಡಿ ಬಾಧಿತ ಪ್ರದೇಶಗಳನ್ನು ಪರಿಶೀಲಿಸಿ, ಸ್ಥಳೀಯರೊಂದಿಗೆ ಸಂವಾದ ನಡೆಸಿದರು. ಶೆಲ್ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಸಾಂತ್ವನ ಹೇಳಿದ ಅವರು, ಪಾಕಿಸ್ತಾನ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿ ದಾಳಿ ಮಾಡಿದ್ದು ಮಾನವೀಯತೆಯ ವಿರುದ್ಧದ ಕ್ರಿಯೆ ಎಂದು ಶಾ ಖಂಡಿಸಿದರು. ಭಾರತದ ಪ್ರತಿಕ್ರಿಯೆಯಲ್ಲಿ ಯಾವುದೇ ನಾಗರಿಕ ಹಾನಿಯಾಗಿಲ್ಲ ಎಂದರು. ಬಿಎಸ್‌ಎಫ್ ಶತ್ರು ನೆಲೆಗಳನ್ನು ನಿಖರವಾಗಿ ಗುರಿಯಾಗಿಸಿ ನಾಶಪಡಿಸಿರುವುದಾಗಿ ಶ್ಲಾಘಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande