ಕೃಷಿ ಇಲಾಖೆಯಿಂದ ದೇಸಿ ತಳಿಗಳ ಸಂರಕ್ಷಣೆ
ರಾಯಚೂರು, 30 ಮೇ (ಹಿ.ಸ.) : ಆ್ಯಂಕರ್ : ಕಣ್ಮರೆಯಾಗುತ್ತಿರುವರುವ ದೇಸಿ ತಳಿಗಳನ್ನು ಸಂರಕ್ಷಣೆ ಹಾಗೂ ಸಂರಕ್ಷಿಸಿ ಕೃಷಿ ಮಾಡುತ್ತಿರುವ ರೈತರಿಗೆ ಉತ್ತೇಜನ ನೀಡಲು ಕೃಷಿ ಇಲಾಖೆಯಿಂದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸ್ಥಳಿಯ ತಳಿಗಳು ಅಥವಾ ಸಾಂಪ್ರಾದಾಯಿಕ
ಕೃಷಿ ಇಲಾಖೆಯಿಂದ ದೇಸಿ ತಳಿಗಳ ಸಂರಕ್ಷಣೆ


ರಾಯಚೂರು, 30 ಮೇ (ಹಿ.ಸ.) :

ಆ್ಯಂಕರ್ : ಕಣ್ಮರೆಯಾಗುತ್ತಿರುವರುವ ದೇಸಿ ತಳಿಗಳನ್ನು ಸಂರಕ್ಷಣೆ ಹಾಗೂ ಸಂರಕ್ಷಿಸಿ ಕೃಷಿ ಮಾಡುತ್ತಿರುವ ರೈತರಿಗೆ ಉತ್ತೇಜನ ನೀಡಲು ಕೃಷಿ ಇಲಾಖೆಯಿಂದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಸ್ಥಳಿಯ ತಳಿಗಳು ಅಥವಾ ಸಾಂಪ್ರಾದಾಯಿಕ ಕೃಷಿ ಪದ್ಧತಿಯಿಂದ ಅಭಿವೃದ್ಧಿ ನಿರ್ವಹಿಸಲ್ಪಡುವ ತಳಿಗಳು ದೇಸಿ ತಳಿಗಳೆಂದು ಕರೆಯಲ್ಪಡುತ್ತವೆ. ಇವು ರೈತರ ಸಾಂಪ್ರಾದಾಯಿಕ ಪರಂಪರೆ, ಜಾನಪದ ಪ್ರಭೇದಗಳಾಗಿರುತ್ತವೆ. ಈ ತಳಿಗಳಲ್ಲಿರುವ ವೀಶಷ್ಟ ಗುಣಲಕ್ಷಣಳು ಮತ್ತು ಭೌಗೋಳಕ ಮೂಲಗಳ ಕಾರಣದಿಂದಾಗಿ ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಅಧಿಸೂಚಿತ ಪ್ರಭೇದಗಳಿಗಿಂತ ದೇಸಿ ತಳಿಗಳ ಪ್ರೋತ್ಸಾಕಾಂಶಳಲ್ಲಿ ಸಮೃದ್ಧವಾಗಿವೆ. ಆದರೇ ಕೆಲವೇ ರೈತರು ಇಂತಹ ದೇಸಿ ತಳಿ ಕೃಷಿ ಮಾಡುವುದನ್ನು ಮುಂದುವರೆಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಕೃಷಿ ಇಲಾಖಾವತಿಯಿಂದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗುತ್ತಿದೆ.

ಈ ಉತ್ತೇಜನ ಕಾರ್ಯಕ್ರಮದಡಿ ಕಣ್ಮರೆಯಾಗುತ್ತಿರುವ ತಳಿಗಳನ್ನೊಳಗೊಂಡಂತೆ ಆಯಾ ಸ್ಥಳೀಯ ಪ್ರದೇಶಕ್ಕೆ ಸೂಕ್ತವಾದ ದೇಸಿ ತಳಿಗಳ ಗುರುತಿಸುವಿಕೆ ಹಾಗೂ ಸಂರಕ್ಷಿಸುವುದು, ಗುರುತಿಸಿದ ದೇಸಿ ತಳಿಗಳನ್ನು ಅಭಿವೃದ್ಧಿ ಪಡಿಸುವುದು ದೇಸಿ ತಳಿಗಳನ್ನು ಹಿಂದಿನಿಂದಲೂ ಸಂರಕ್ಷಿಸಿ, ಕೃಷಿ ಮಾಡುತ್ತಿರುವ ರೈತರಿಗೆ ಬೆಂಬಲ ನೀಡುವುದು ದೇಸಿ ತಳಿಗಳ ನಿರಂತರ ಕೃಷಿಯನ್ನು ಪ್ರೋತ್ಸಾಹಿಸುವುದು,ಜೀವ ವೈವಿದ್ಯತೆಯನ್ನು ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಕಾಪಾಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಈ ಕಾರ್ಯಕ್ರದಡಿ ಭತ್ತ, ರಾಗಿ, ಜೋಳ, ತೊಗರಿ, ಹುರುಳಿ, ಅವರೆ, ಅಲಸಂದೆ, ಮಡಕಿ ಕಾಳು, ಹಚ್ಚೆಳ್ಳು, ಕುಸುಬೆ, ಎಳ್ಳು, ಮೆಣಸಿನಕಾಯಿ ನವಣೆ, ಸಾಮೆ, ಊದಲು, ಕೊರಲೆ, ಹಾರಕ, ಬರಗು ಹಾಗೂ ಸಲಹಾ ಸಮಿತಿಯು ಶಫಾರಸ್ಸು ಮಾಡುವ ಇತರೆ ಬೆಳೆಗಳನ್ನು ಆಯ್ಕೆ ಮಾಡಲಾಗಿದೆ. ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮದಡಿ ಬೆಂಬಲ ಹಾಗೂ ಪ್ರೋತ್ಸಾಹ ಪಡೆಯಲಿಚ್ಚಿಸುವ ಮತ್ತು ಹೆಚ್ಚಿನ ಮಾಹಿತಿಯನ್ನು ಪಡೆಯಲು ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾದ ಜಯಪ್ರಕಾಶ್ ಟಿ.ಸಿ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande