ತಪ್ಪಿದ್ದರೆ ಮಾತ್ರ ಕ್ಷಮೆ ಕೇಳುವೆ : ಕಮಲ್ ಹಾಸನ್
ಚೆನೈ, 30 ಮೇ (ಹಿ.ಸ.) : ಆ್ಯಂಕರ್ : ಹಿರಿಯ ಬಹು ಭಾಷಾ ನಟ ಹಾಗೂ ತಮಿಳುನಾಡಿನ ಎಂಎನ್‌ಎಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಅವರು ಕನ್ನಡ ಭಾಷೆ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯಿಂದಾಗಿ ಕರ್ನಾಟಕದಲ್ಲಿ ಎದುರಾಗುತ್ತಿರುವ ವಿರೋಧದ ಮಧ್ಯೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸಭಾ ಚುನಾವಣೆ ಸಂಬಂಧ ತಮಿಳುನಾ
Kamal  hassan


ಚೆನೈ, 30 ಮೇ (ಹಿ.ಸ.) :

ಆ್ಯಂಕರ್ : ಹಿರಿಯ ಬಹು ಭಾಷಾ ನಟ ಹಾಗೂ ತಮಿಳುನಾಡಿನ ಎಂಎನ್‌ಎಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಅವರು ಕನ್ನಡ ಭಾಷೆ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯಿಂದಾಗಿ ಕರ್ನಾಟಕದಲ್ಲಿ ಎದುರಾಗುತ್ತಿರುವ ವಿರೋಧದ ಮಧ್ಯೆ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯ ಸಭಾ ಚುನಾವಣೆ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿ ಮಾಡಿದ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿ. ಎಲ್ಲಾ ಭಾಷೆಗಳ ಮೇಲೂ ನನಗೆ ಪ್ರೀತಿ ಇದೆ. ಕೇವಲ ಅಜೆಂಡಾ ಇರುವವರಿಗೇ ನನ್ನ ಮಾತಿನಲ್ಲಿ ತೊಂದರೆ ಆಗಿದೆ ಎಂದರು.

ಕರ್ನಾಟಕದಲ್ಲಿ ಕಮಲ್ ಹಾಸನ್ ಚಿತ್ರ ಥಗ್ ಲೈಫ್ ಬಿಡುಗಡೆಗೆ ವಿರೋಧ ವ್ಯಕ್ತವಾಗಿದ್ದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕಮಲ್ ಹಾಸನ್ ಕನ್ನಡಿಗರ ಕ್ಷಮೆಗೆ ಆಗ್ರಹಿಸಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಕಮಲ್ ಹಾಸನ್, ನಾನು ಕಾನೂನು, ನ್ಯಾಯದಲ್ಲಿ ನಂಬಿಕೆ ಇಡುತ್ತೇನೆ. ಈ ಹಿಂದೆ ನನ್ನನ್ನು ಬೆದರಿಸಲಾಗಿದೆ. ನಾನು ತಪ್ಪು ಮಾಡಿದ್ದರೆ ಕ್ಷಮೆ ಕೇಳುತ್ತೇನೆ. ತಪ್ಪಿಲ್ಲದಿದ್ದರೆ ಕ್ಷಮೆ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande