ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ : ಐದು ಸಾವು, 25 ಜನರಿಗೆ ಗಾಯ
ಮುಕ್ತಸರ್, 30 ಮೇ (ಹಿ.ಸ.) : ಆ್ಯಂಕರ್ : ಪಂಜಾಬಿನ ಮುಕ್ತಸರ್ ಪಟಾಕಿ ಕಾರ್ಖಾನೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಐದು ಕಾರ್ಮಿಕರು ಸಾವನ್ನಪ್ಪಿ, 25 ಮಂದಿ ಗಾಯಗೊಂಡಿದ್ದಾರೆ. ಸ್ಫೋಟದಿಂದ ಕಟ್ಟಡ ಸಂಪೂರ್ಣ ಧ್ವಂಸವಾಗಿದೆ, ಇಬ್ಬರು ಇನ್ನೂ ಕಾಣೆಯಾಗಿದ್ದಾರೆ. ಹತ್ರಾಸ್‌ನ ರಾಜ್‌ಕುಮಾರ
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ : ಐದು ಸಾವು, 25 ಜನರಿಗೆ ಗಾಯ


ಮುಕ್ತಸರ್, 30 ಮೇ (ಹಿ.ಸ.) :

ಆ್ಯಂಕರ್ : ಪಂಜಾಬಿನ ಮುಕ್ತಸರ್ ಪಟಾಕಿ ಕಾರ್ಖಾನೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಐದು ಕಾರ್ಮಿಕರು ಸಾವನ್ನಪ್ಪಿ, 25 ಮಂದಿ ಗಾಯಗೊಂಡಿದ್ದಾರೆ. ಸ್ಫೋಟದಿಂದ ಕಟ್ಟಡ ಸಂಪೂರ್ಣ ಧ್ವಂಸವಾಗಿದೆ, ಇಬ್ಬರು ಇನ್ನೂ ಕಾಣೆಯಾಗಿದ್ದಾರೆ.

ಹತ್ರಾಸ್‌ನ ರಾಜ್‌ಕುಮಾರ್ ಅವರ ಗುತ್ತಿಗೆದಾರಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಖಾನೆಯಲ್ಲಿ, ಕೆಲಸದ ಜೊತೆಗೆ ಹಲವರು ಅಲ್ಲಿಯೇ ವಾಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್‌ಡಿಆರ್‌ಎಫ್ ತಂಡಗಳೊಂದಿಗೆ ರಾತ್ರಿಯಿಂದಲೇ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande