ಬಳ್ಳಾರಿ, 30 ಮೇ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ನೂತನ ಅಧ್ಯಕ್ಷರಾಗಿ ಹೆಚ್. ತಿಮ್ಮನಗೌಡ ಅವರು ಆಯ್ಕೆಯಾಗಿದ್ದಾರೆ.
ಬಳ್ಳಾರಿ ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರ ವರ್ತಕರು, ಸಂಘದ ನಿರ್ದೇಶಕರು ಮತ್ತು ತಾಲೂಕು ಅಧ್ಯಕ್ಷರುಗಳು ಸೇರಿ ಹೆಚ್. ತಿಮ್ಮನಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.
ಈವರೆಗೆ ಈ ಸ್ಥಾನದಲ್ಲಿದ್ದ ಗಣಪಾಲ ಐನಾಥರೆಡ್ಡಿ ಅವರು ಅಧಿಕಾರದಲ್ಲಿದ್ದರು. ಅವರ ಅಧಿಕಾರವಧಿ ಮುಗಿದ ಕಾರಣ ನೂತನ ಅಧ್ಯಕ್ಷರ ಆಯ್ಕೆ ನಡೆದಿದೆ.
ಹೆಚ್. ತಿಮ್ಮನಗೌಡ ಅವರು ಬಳ್ಳಾರಿ ಗ್ರಾಮೀಣ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಜಮೀನು ಸಕ್ರಮೀಕರಣ ಸಮಿತಿಯ ಅಧ್ಯಕ್ಷರಾಗಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್