ಕಲಬುರಗಿ, 30 ಮೇ (ಹಿ.ಸ.)
ಆ್ಯಂಕರ್ : ನರೇಗಾ ನೌಕರರ ಬಾಕಿ ವೇತನ ಬಿಡುಗಡೆ ಮಾಡುವಂತೆ ಹಾಗೂ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಕಲಬುರಗಿ ನಗರದಲ್ಲಿ ಉದ್ಯೋಗ ಖಾತರಿ ಕಾರ್ಮಿಕರು ಶಾಂತಿಯುತ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದ ನಗರದ ಜಿಲ್ಲಾ ಪಂಚಾಯತ ಕಚೇರಿಯ ಎದುರು ಧರಣಿ ಆಕ್ರೋಶ ವ್ಯಕ್ತಪಡಿಸಿದರು. ನೌಕರರು, ಕೂಡಲೆ ವೇತನ ಪಾವತಿಸುವಂತೆ ಒತ್ತಾಯಿಸಿದರು.
ಕಳೆದ ಹಲವು ತಿಂಗಳುಗಳಿಂದ ನರೇಗಾದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ವೇತನ ನೀಡದೆ ಸತಾಯಿಸಲಾಗುತ್ತಿದೆ ಎಂದು ದೂರಿದ ಪ್ರತಿಭಟನಾನಿರತರು ಕೂಡಲೆ ವೇತನ ಬಿಡುಗಡೆ ಮಾಡುವಂತೆ ಹಾಗೂ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ರವಿಶಂಕರ್ ಲಾವಟಿ ಸೇರಿದಂತೆ ಅನೇಕ ನರೇಗಾ ಕಾರ್ಮಿಕರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Samarth biral