ಹೊಸಪೇಟೆ, 30 ಮೇ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ವಿಶ್ವ ತಂಬಾಕು ರಹಿತ ದಿನಾಚರಣೆ ನಿಮಿತ್ತ ನಾಳೆ ಬೆಳಿಗ್ಗೆ 10.30 ಕ್ಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಜನಜಾಗೃತಿ ಜಾಥವನ್ನು ಹಮ್ಮಿಕೊಳ್ಳಲಾಗಿದೆ.
ಸಿವಿಲ್ ನ್ಯಾಯಾಧೀಶರಾದ ಪ್ರಶಾಂತ್ ನಾಗಲಾಪುರ ಅವರು ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ. ಅಪರ ಸಿವಿಲ್ ನ್ಯಾಯಾಧೀಶರಾದ ಶೃತಿ ತೇಲಿ ಉಪಸ್ಥಿತರಿಲಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರ್ ನಾಯ್ಕ.ಎಲ್, ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ ಪ್ರಾಸ್ತವಿಕ ನುಡಿಯಲಿದ್ದಾರೆ. ಅತಿಥಿಗಳಾಗಿ ಆರ್ಸಿಹೆಚ್ ಅಧಿಕಾರಿ ಡಾ.ಜಂಬಯ್ಯ, ಡಾ.ಸತೀಶ್ ಚಂದ್ರ, ಡಾ.ಭಾಸ್ಕರ್, ಡಾ.ರಾಧಿಕಾ, ಡಾ.ಬಸವರಾಜ, ತಂಬಾಕು ನಿಯಂತ್ರಣ ಕೋಶದ ಸಂಯೋಜಕ ಮಹಾಂತೇಶ್.ಬಿ. ಉಳ್ಳಾಗಡ್ಡಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್