ಬೆಂಗಳೂರು, 30 ಮೇ (ಹಿ.ಸ.) :
ಆ್ಯಂಕರ್ : ಖ್ಯಾತ ಸಾಹಿತಿ, ಗೀತರಚನೆ ಹಾಗೂ ಸಂಭಾಷಣೆಕಾರ ಡಾ.ಹೆಚ್.ಎಸ್.ವೆಂಕಟೇಶಮೂರ್ತಿ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅನೇಕ ಚಿತ್ರಗಳಿಗೆ ಹಾಡುಗಳು, ಕಥೆ ಮತ್ತು ಸಂಭಾಷಣೆ ಬರೆದಿದ್ದ ಅವರು 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ವೆಂಕಟೇಶ ಮೂರ್ತಿಯವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa