ಬಳ್ಳಾರಿ, 30 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಬಳ್ಳಾರಿ ಜಿಲ್ಲಾ ಘಟಕವು 2924-25 ನೇ ಶೈಕ್ಷಣಿಕ ಸಾಲಿನಲ್ಲಿ ಶೇ.85 ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ಎಸ್ಎಸ್ಎಲ್ಸಿ ಮತ್ತು ದ್ಪಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಜೂನ್ 1 ರ ಭಾನುವಾರ ಅಲ್ಲೀಪುರ ಮಹಾದೇವ ತಾತನವರ ಶ್ರೀಮಠದಲ್ಲಿ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಂಡಿದೆ.
ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಬಳ್ಳಾರಿ ಜಿಲ್ಲಾ ಘಟಕ ಗೌರವ ಅಧ್ಯಕ್ಷ ಆರ್.ಹೆಚ್.ಎಂ. ಚನ್ನಬಸಯ್ಯ ಮತ್ತು ಪ್ರಧಾನ ಕಾರ್ಯದರ್ಶಿ ಬಸವರಾಜ್ ಬಿಸಲಹಳ್ಳಿ ಅವರು ಸುದ್ದಿಗಾರರಿಗೆ ಈ ಮಾಹಿತಿ ನೀಡಿದ್ದು, ಎಸ್ಎಸ್ಎಲ್ಸಿ ಹಾಗು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, ನಂದಿಪುರದ ಡಾ. ಮಹೇಶ್ವರ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ, ಸಂಘದ ರಾಜ್ಯಾಧ್ಯಕ್ಷ ಸೋಮಶೇಖರಯ್ಯ ಅವರ ನೇತೃತ್ವದಲ್ಲಿ ಪುರಸ್ಕರಿಸಲಾಗುತ್ತದೆ ಎಂದರು.
ವಿದ್ಯಾರ್ಥಿಗಳನ್ನು ಅಭಿನಂದಿಸಿದ ನಂತರ, ಎಸ್ಎಸ್ಎಲ್ಸಿ ಮತ್ತು ಪಿಯುಸಿ ನಂತರ ಏನು? ಎನ್ನುವ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿಗಳು ಉಪನ್ಯಾಸ ನೀಡಲಿದ್ದಾರೆ ಎಂದರು.
ವಿವರಗಳಿಗಾಗಿ : ಆರ್.ಹೆಚ್.ಎಂ. ಚನ್ನಬಸಯ್ಯ 94815 64712 ಅಥವಾ ಬಸವರಾಜ್ ಬಿಸಲಹಳ್ಳಿ 733 774 5561 ಅವರಿಗೆ ಸಂಪರ್ಕಿಸಿ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್