ಮಂಗಳೂರು, 30 ಮೇ (ಹಿ.ಸ.) :
ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ನೆಲ ಕುಸಿತ ಹಾಗೂ ತಡೆಗೋಡೆ ಕುಸಿತದ ಕಾರಣದಿಂದ ಎರಡು ಪ್ರತ್ಯೇಕ ದುರ್ಘಟನೆಗಳಲ್ಲಿ ಎರಡು ಮಗು ಸೇರಿ ಮೂವರು ಮೃತಪಟ್ಟಿದ್ದು ಅವಶೇಷಗಳ ಅಡಿ ಸಿಲುಕಿರುವ ಮಹಿಳೆಯೊರ್ವಳ ರಕ್ಷಣಾ ಕಾರ್ಯ ಮುಂದುವರೆದಿದೆ.
ಬೆಳ್ಳಗ್ರಾಮದ ಕಾನಕರೆಯಲ್ಲಿರುವ ನೌಶಾದ್ ಎಂಬವರ ಮನೆಯ ಹಿಂಭಾಗದಲ್ಲಿರುವ ತಡೆಗೋಡೆ ಹಾಗೂ ಗುಡ್ಡ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ, ಮನೆಯೊಳಗಿನ ಕೊಠಡಿಯ ಕಿಟಕಿಯಡಿ ಸಿಲುಕಿ ನೌಶಾದ್ ಅವರ ಪುತ್ರಿ ನಯೀಮ ಮೃತಳಾಗಿದ್ದಾಳೆ.
ಮಂಜನಾಡಿ ಗ್ರಾಮದ ಮೊಂಟೆಪದವು ಕೋಡಿಯಲ್ಲಿ ಇರುವ ಕಾಂತಪ್ಪ ಪೂಜಾರಿ ಅವರ ಮನೆಯ ಮೇಲೆ ಗುಡ್ಡ ಜರಿದು ಬಿದ್ದಿದೆ. ಈ ದುರ್ಘಟನೆಯಲ್ಲಿ ಅವರ ಪತ್ನಿ ಪ್ರೇಮ (50) ಹಾಗೂ ಒಂದು ಮಗು ಮೃತಪಟ್ಟಿದ್ದಾರೆ.
ಮಣ್ಣಿನಲ್ಲಿ ಸಿಲುಕಿರುವ ಒಬ್ಬ ಮಹಿಳೆ ಹಾಗೂ ಇಬ್ಬರು ಮಕ್ಕಳಲ್ಲಿ ಒಂದು ಮಗುವನ್ನು ಜೀವಂತವಾಗಿ ರಕ್ಷಿಸಲಾಗಿದ್ದು,ಒಂದು ಮಗು ಮೃತಪಟ್ಟಿದ್ದು, ಮಹಿಳೆಯ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa