ಕೊಪ್ಪಳ, 31 ಮೇ (ಹಿ.ಸ.) :
ಆ್ಯಂಕರ್ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ವಿಶೇಷ ಶಾಲೆಗಳಿಗೆ 2025-26ನೇ ಸಾಲಿನ ಪ್ರವೇಶ ಪ್ರಾರಂಭವಾಗಿದ್ದು, ಅರ್ಹ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು.
ಜಿಲ್ಲೆಯ ಗಂಗಾವತಿಯ ಲಯನ್ಸ್ ಬುದ್ದಮಾಂದ್ಯ ಮಕ್ಕಳ ವಸತಿಯುತ ಶಾಲೆಯಲ್ಲಿ ಪ್ರಸಕ್ತ ಸಾಲಿಗೆ ಪ್ರವೇಶ ಪ್ರಾರಂಭವಾಗಿದ್ದು, ಊಟ, ವಸತಿ, ಸಮವಸ್ತ್ರ ಹಾಗೂ ಪುಸ್ತಕಗಳು ಮತ್ತು ಇನ್ನಿತರ ಮುಲಭೂತ ಸೌಲಭ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತದೆ.
ಶಾಲೆಯಲ್ಲಿ ವಿಶೇಷ ಶಿಕ್ಷಣದಲ್ಲಿ ತರಬೇತಿ ಪಡೆದ ನುರಿತ ಅನುಭವಿ ಶಿಕ್ಷಕರಿಂದ ಮಕ್ಕಳಿಗೆ ವಿಶೇಷ ಶಿಕ್ಷಣ ಮತ್ತು ತರಬೇತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಶಾಲೆಯ ಅಧೀಕ್ಷಕರಾದ ಪ್ರಭು ಹಿರೇಮಠ ಮೊ. ಸಂಖ್ಯೆ: 9241372265 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೆಂಕಟೇಶ ದೇಶಪಾಂಡೆ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್