ಆಕರ್ಷಕ ಉತ್ಪನ್ನಗಳು ಕರಾಳ ಉದ್ದೇಶಗಳು : ಸಿ.ಎಸ್.ಶಿವನಗೌಡ್ರ
ಗದಗ, 31 ಮೇ (ಹಿ.ಸ.) : ಆ್ಯಂಕರ್ : ಪ್ರತಿ ವರ್ಷದಂತೆ ಈ ವರ್ಷ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು “ಆಕರ್ಷಕ ಉತ್ಪನ್ನಗಳು ಕರಾಳ ಉದ್ದೇಶಗಳು” ಎಂಬ ಘೋಷಣೆಯೊಂದಿಗೆ ಗದಗ ಜಿಲ್ಲಾಡಳಿತ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಗದಗ, ಜಿಲ್ಲಾ ಪೊಲೀಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾ
ಪೋಟೋ


ಗದಗ, 31 ಮೇ (ಹಿ.ಸ.) :

ಆ್ಯಂಕರ್ : ಪ್ರತಿ ವರ್ಷದಂತೆ ಈ ವರ್ಷ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು “ಆಕರ್ಷಕ ಉತ್ಪನ್ನಗಳು ಕರಾಳ ಉದ್ದೇಶಗಳು” ಎಂಬ ಘೋಷಣೆಯೊಂದಿಗೆ ಗದಗ ಜಿಲ್ಲಾಡಳಿತ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಗದಗ, ಜಿಲ್ಲಾ ಪೊಲೀಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾರಾಗೃಹ ಗದಗ, ಜಿಲ್ಲಾ ಸಮೀಕ್ಷಾ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಗದಗ ಇವರ ಸಂಯುಕ್ತಾಶ್ರಯದಲ್ಲಿಂದು ಜಿಲ್ಲಾ ಕಾರಾಗೃಹ ಗದಗದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಹಿರಿಯ ದಿವಾಣಿ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯಧರ್ಶಿ ಸಿ.ಎಸ್.ಶಿವನಗೌಡ್ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ 2025 ಕರ್ನಾಟಕ ಅಧಿನಿಯಮ ದಿನಾಂಕ: ಮೇ 30 ರಂದು ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ ಸಿಗರೇಟುಗಳ ಮತ್ತು ಇತರ ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮನ (ಕರ್ನಾಟಕ ರಾಜ್ಯ ಸರಕಾರದ ತಿದ್ದುಪಡಿಯ ಅಧಿನಿಯಮ) ಸೆಕ್ಷನ್ (ಎ) ರಲ್ಲಿ ಈ ಮೊದಲು 18 ವರ್ಷಕ್ಕಿತ ಕಡಿಮೆ ವಯಸ್ಸಿನವರಿಗೆ ತಂಬಾಕು ಉತ್ಪನ್ನಗಳ ನಿಷೇಧವನ್ನು 21 ವರ್ಷಕ್ಕೆ ಏರಿಸಿ ದಂಡದ ಮೊತ್ತ 1000 ರೂವರೆಗೆ ಹೆಚ್ಚಿಸಲಾಗಿದೆ, ಅದೇ ರೀತಿ ಶಿಕ್ಷಣ ಸಂಸ್ಥೆಗಳ ಸುತ್ತ ತಂಬಾಕು ಮಾರಾಟ ನಿಷೇಧ ಹಾಗೂ sಸಾರ್ವಜನಿಕ ಸ್ಥಳಗಳಲ್ಲಿ ಧೂಮಾಪಾನ ಮಾಡಿದರೆ ಈ ಮೊದಲು 200 ರೂಪಾಯಿವರೆಗೆ ದಂಡ ವಿಧಿಸಲಾಗುತ್ತಿತ್ತು ಸದರಿ ತಿದ್ದುಪಡಿಯ ನಂತರ 1000 ರೂವರಗೆ ದಂಡದ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದ ಅವರು ತಂಬಾಕು ದುಷ್ಟಟಗಳಿಂದ ಉಂಟಾಗುವ ದುಷ್ಟರಿಣಾಮಗಳ ಬಗ್ಗೆ ತಿಳಿಸಿ ಜೀವನ ಶೈಲಿ ಬದಲಾವಣೆ ಮೂಲಕ ದುಷ್ಟಟಗಳಿಂದ ಹೊರಬರಲು ಮನವರಿಕೆ ಮಾಡಿದರು.

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಥೋಡ್ ಇವರು ಮಾತನಾಡುತ್ತಾ ಈ ವರ್ಷ ಘೋಷವ್ಯಾಕ್ಕೆ “ಆಕರ್ಷಕ ಉತ್ಪನ್ನಗಳು ಕರಾಳ ಉದ್ದೇಶಗಳು” ತಂಬಾಕು ಮತ್ತು ನಿಕೋಟಿನ್ ಉದ್ಯಮಗಳ ಮುಖವಾಡವನ್ನು ಬಿಚ್ಚಿಡುವದು, ಅಂದರೆ ಮಾರುಕಟ್ಟೆಯಲ್ಲಿ ಆಕರ್ಷಕವಾದ ವಿವಿಧ ಸುಗಂಧಿತ ಹಾಗೂ ಆಕರ್ಷಕ ಪ್ಯಾಕ್‌ಗಳ ಮೂಲಕ ತಂಬಾಕು ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿ ಜನರು ಹೆಚ್ಚು ಆಕರ್ಷಿತರಾಗಿ ವ್ಯಸನಕ್ಕೆ ಬಲಿಯಾಗುವಂತೆ ಮಾಡುವ ಉದ್ಯಮಗಳ ಮುಖವಾಡ ಬಿಚ್ಚಿಡುವುದಾಗಿದೆ. ತಂಬಾಕು ವ್ಯಸನದಿಂದ ಆರೋಗ್ಯ ಮೇಲೆ ಬಹಳಷ್ಟು ದುಷ್ಟರಿಣಾಮಗಳ ಉಂಟಾಗುತ್ತವೆ ಉದಾಹರಣೆ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಪಾರ್ಶ್ವವಾಯು ಹಾಗೂ ತಂಬಾಕಿನಲ್ಲಿನ ನಿಕೋಟಿನ್ ಅಂಶ ರಕ್ತನಾಳಗಳಲ್ಲಿ ಸೇರಿ ದೇಹದ ಪ್ರತಿಯೊಂದು ಅಂಗದ ಮೇಲೆ ಪರಿಣಾಮ ಬಿರುತ್ತದೆ, ಈ ಕುರಿತು ನಿರಂತರ ಜಾಗೃತಿ ಕಾರ್ಯಕ್ರಮ, ತರಬೇತಿ ಕಾರ್ಯಕ್ರಮ, ಕೋಟ್ಪಾ ದಾಳಿ ಹಮ್ಮಿಕೊಳ್ಳಲಾಗಿದೆ, ತಂಬಾಕು ವ್ಯಸನಿಗಳಿಗೆ ನಮ್ಮ ಜಿಲ್ಲೆಯಲ್ಲಿ ಜಿಲ್ಲಾ ಆಸ್ಪತ್ರೆಯ ರೂ.ನಂ 182 ರಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರ ಲಭ್ಯವಿದ್ದು, ಈ ಕೇಂದ್ರದಲ್ಲಿ ಉಚಿತ ಆಪ್ತ ಸಮಾಲೋಚನೆ ಔಷಧೋಪಚಾರ ಸೇವೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಜಿ.ಬಿ,ಗೌರಿ ಎಲ್‌ಎಡಿಸಿ ಸಹಾಯಕ ಕಾನೂನು ನೆರವು ಅಭಿರಕ್ಷಕರು ಗದಗ, ಇವರು ಮಾತನಾಡುತ್ತ ಕಾನೂನುಗಳು ಪರಿಣಾಮಕಾರಿ ಅನುಷ್ಠಾನಕ್ಕೆ ಕೇವಲ ಅಧಿಕಾರಿಗಳ ಪಾತ್ರ ಇರದೆ ಸಾರ್ವಜನಿಕರು ಕಾನೂನಿನ ಬಗ್ಗೆ ಗೌರವ ಪಾಲನೆ ಮಾಡಿದಾಗ ಸೂವ್ಯವಸ್ಥಿತ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯವೆಂದು ತಿಳಿಸಿದರು. ನಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀ ಈರಣ್ಣ ರಂಗಾಪೂರ ಅಧೀಕ್ಷಕರು ಜಿಲ್ಲಾ ಕಾರಾಗೃಹ ಗದಗ, ದುಷ್ಟಟಗಳಿಂದ ಉಂಟಾಗುವ ಪರಿಣಾಮವನ್ನು ನೀತಿ ಕಥೆಯ ಮೂಲಕ ಬಂಧಿ ನಿವಾಸಿಗಳು ಮನ ಪರಿವರ್ತನೆ ಮಾಡುವಂತೆ ಪರಿಣಾಮಕಾರಿಯಾಗಿ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀüಕ್ಷಕರಾದ ಎಮ್ ಬಿ ಸಂಕz, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್. ಎಸ್. ನೀಲಗುಂದ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ್ ಚವ್ಹಾಣ ವಿಠ್ಠಲ್ ನಾಯಕ ಎಫ್.ಎಲ್.ಸಿ ಎನ್.ಸಿ.ಡಿ. ಗದಗ ಡಾ.ರವಿ. ಕಡಗಾವಿ. ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಎನ್.ಸಿ.ಡಿ. ವಿಭಾಗ. ವಿರೇಶ ಮದಕಟ್ಟಿ ಐ.ಡಿ.ಎಸ್.ಪಿ ಡಾಟಾ ಮಾನ್ಯಜರ್ ಶಿವಕುಮಾರ ಬಗಾಡೆ, ಜಿಲ್ಲಾ ಕಾರಾಗೃಹ ಅಧಿಕಾರಿ ಸಿಬ್ಬಂದಿಗಳು ಹಾಗೂ ಬಂಧಿ ನಿವಾಸಿಗಳು ಉಪಸ್ಥಿತರಿದ್ದರು.

ಎನ್.ಟಿ.ಸಿ.ಪಿ ಜಿಲ್ಲಾ ಸಲಹೆಗಾರರಾದ ಗೋಪಾಲ ಸುರಪುರ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಬಿ.ಸಿ. ಚಿತ್ತರಗಿ ಸಾಮಾಜಿಕ ಕಾರ್ಯಕರ್ತೆ ಪ್ರಾರ್ಥಿಸಿದರು ಹಾಗೂ ವಿಠ್ಠಲ್ ನಾಯಕ ಎಫ್.ಎಲ್.ಸಿ ಸ್ವಾಗತಿಸಿದರು.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande