ಕೋಲಾರ, ೩೧ ಮೇ (ಹಿ.ಸ) :
ಆ್ಯಂಕರ್ : ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜನಔಷಧಿ ಕೇಂದ್ರಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಿಲುವಿಗೆ ಜನಾಕ್ರೋಶ ವ್ಯಕ್ತವಾಗಿದೆ. ಜನ ಔಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಕೋಲಾರದಲ್ಲಿ ಬಿಜೆಪಿ ಕಾರ್ಯಕರ್ತರು ಸರ್ಕಾರಿ ಎಸ್.ಎನ್.ಆರ್. ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಜನಔಷಧಿ ಕೇಂದ್ರಗಳ ಮೂಲಕ ಕೈಗೆಟುಕುವ ದರಗಳಲ್ಲಿ ಔಷಧಿಗಳನ್ನು ಮಾರಾಟ ಮಾಡಲಾಗುತ್ತಿದೆ. ಜನಔಷಧಿ ಕೇಂದ್ರಗಳು ದೇಶಾದ್ಯಂತ ಬೃಹತ್ ಜಾಲ ಹೊಂದಿವೆ. ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆ ಆಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಅಗತ್ಯವಿರುವ ಎಲ್ಲಾ ಔಷಧಿಗಳು ಉಚಿತವಾಗಿ ಲಭ್ಯವಿದೆ. ಇದರಿಂದಾಗಿ ಜನ ಔಷಧಿ ಕೇಂದ್ರಗಳನ್ನು ಮುಚ್ಚಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಇತ್ತೀಚೆಗೆ ತಿಳಿಸಿದ್ದರು.
ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂ ಶಕ್ತಿ ಚಲಪತಿ ಮಾತನಾಡಿ ಜಿಲ್ಲಾ ಆಸ್ಪತ್ರೆಗಳಲ್ಲಿ ಜೀವರಕ್ಷಕ ಔಷಧಿಗಳ ಕೊರತೆ ಇದ್ದು, ಜನ ಔಷಧಿ ಕೇಂದ್ರದಲ್ಲಿ ಔಷಧಿಗಳನ್ನು ರೋಗಿಗಳಿಗೆ ಮಾರಾಟ ಮಾಡಲಾಗುತ್ತಿದೆ. ಇದರಿಂದಾಗಿ ಕೂಲಿ ಕಾರ್ಮಿಕರು, ಬಡವರು ಹಣ ಉಳಿತಾಯ ಮಾಡುತ್ತಿದ್ದಾರೆ. ಉದ್ದೇಶ ಪೂರ್ವಕವಾಗಿ ಜನ ಔಷಧಿ ಕೇಂದ್ರಗಳನ್ನು ಮುಚ್ಚಲಾಗುತ್ತಿದೆ ಎಂದು ಆರೋಪಿಸಿದರು.
ಕೋಲಾರ ಜಿಲ್ಲಾ ಬಿಜೆಪಿ ಜಿಲ್ಲಾ ವಕ್ತಾರ ಎಸ್.ಬಿ ಮುನಿವೆಂಕಟಪ್ಪ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಜನ ಔಷಧಿ ಕೇಂದ್ರಗಳ ಮೂಲಕ ಗುಣ ಮಟ್ಟದ ಔಷಧಿಗಳನ್ನು ಕೈಗೆಟುಕುವ ದರಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಯೋಜನೆಯ ಜನಪ್ರಿಯತೆಯನ್ನು ಸಹಿಸದೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನ ಔಷಧಿ ಕೇಂದ್ರಗಳನ್ನು ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಜನ ವಿರೋಧಿ ನೀತಿಯಾಗಿದೆ ಎಂದು ಆರೋಪಿಸಿದರು.
ವಕೀಲ ಶ್ರೀನಿವಾಸ್ ಮಾತನಾಡಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನ ಔಷಧಿ ಕೇಂದ್ರಗಳನ್ನು ಮುಚ್ಚುವುದು ಬಡವರ ವಿರೋಧಿ ಕ್ರಮ ಆಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಇದೆ. ಕೊರತೆಯನ್ನು ಜನ ಔಷಧಿ ಕೇಂದ್ರಗಳು ನೀಗುತ್ತಿವೆ ಎಂದು ಅಭಿಪ್ರಾಯಪಟ್ಟರು.
ಕೋಲಾರ ಮಹಾಲಕ್ಷಿö್ಮ ಬಡಾವಣೆಯ ನಿವಾಸಿ ಸೈಯದ್ ಜಬೀವುಲ್ಲಾ ಮಾತನಾಡಿ ಜನ ಔಷಧಿ ಕೇಂದ್ರಗಳಿAದ ಬಡವರಿಗೆ ಅನುಕೂಲವಾಗಿದೆ. ನಮ್ಮ ಅತ್ತೆ ಮಧುಮೇಹ ಮತ್ತು ರಕ್ತದ ಒತ್ತಡದಿಂದ ಬಳಲುತ್ತಿದ್ದು, ಖಾಸಗಿ ಔಷಧಿ ಅಂಗಡಿಗಳಲ್ಲಿ ಔಷಧಿ ಖರೀದಿಗೆ ಪ್ರತಿ ತಿಂಗಳು ೭೫೦ ರೂಪಾಯಿ ವೆಚ್ಚ ಮಾಡುತ್ತಿದ್ದರು. ಆದರೆ ಜನಔಷಧಿ ಕೇಂದ್ರಗಳಲ್ಲಿ ಕೈಗೆಟುವ ದÀರಗಳಲ್ಲಿ ಔಷಧಿ ಖರೀದಿಗೆ ಕೇವಲ ೧೩೧ ರೂಪಾಯಿ ವೆಚ್ಚ ಮಾಡುತ್ತಾರೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಕೆಂಬೋಡಿ ನಾರಾಯಣಸ್ವಾಮಿ, ವಿಜಯಕುಮಾರ್, ಸಿ.ಡಿ. ರಾಮಚಂದ್ರ, ತಿಮ್ಮರಾಯಪ್ಪ ಮುಂತಾದವರು ಭಾಗವಹಿಸಿದ್ದರು.
ಚಿತ್ರ : ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನ ಔಷಧಿ ಕೇಂದ್ರಗಳ ಮುಚ್ಚುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಕೋಲಾರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್