ಗದಗ, 31 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಗದಗ ಜಿಲ್ಲಾ ಸಹಕಾರ ಯೂನಿಯನ್ ನಿ., ಸಹಕಾರ ಇಲಾಖೆ, ಕೆ.ಸಿ.ಸಿ. ಬ್ಯಾಂಕ್ ಲಿ., ಧಾರವಾಡ, ಕೆ.ಎಂ.ಎಫ್. ಧಾರವಾಡ ಹಾಗೂ ಗದಗ ಜಿಲ್ಲೆಯ ಸಹಕಾರ ಸಂಘ, ಬ್ಯಾಂಕುಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ – 2025 ರ ಅಂಗವಾಗಿ “ಸಹಕಾರದಿಂದ ಸ್ವಚ್ಚತಾ ಅಭಿಯಾನ” ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಗದಗ ನಗರದ ಕೆ.ಸಿ.ಸಿ. ಬ್ಯಾಂಕ್ ಆವರಣದಲ್ಲಿ ಜರುಗಿತು.
ಕೆ.ಸಿ.ಸಿ. ಬ್ಯಾಂಕ್ ಲಿ., ಧಾರವಾಡ ಇದರ ನಿರ್ದೇಶಕರಾದ ಎಂ.ಎಫ್. ಕಲಗುಡಿರವರು ಸಹಕಾರ ಜ್ಯೋತಿ ಬೆಳಗಿಸುವದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಭಾರತ ಸರ್ಕಾರದ ಮಹತ್ವಾಕಾಂಕ್ಷಯ ಯೋಜನೆ “ಸ್ವಚ್ಚ ಭಾರತ ಅಭಿಯಾನ” ಅಕ್ಟೋಬರ್ 2, 2014 ರಲ್ಲಿ ಪ್ರಾರಂಭಗೊಂಡಿರುತ್ತದೆ. ಆದರೆ ಕೇಂದ್ರ ಸರ್ಕಾರವು 2025 ನೇ ವರ್ಷವನ್ನು ಅಂತರಾಷ್ಟ್ರೀಯ ಸಹಕಾರ ವರ್ಷ ಎಂದು ಘೋಷಿಸಿದ್ದು ಅದರ ಧ್ಯೇಯ : ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸಬಲ್ಲವು ಹಾಗೂ ವಿಷಯ ಸಹಕಾರದಿಂದ ಸ್ವಚ್ಚತೆ ಅಭಿಯಾನ ಕಾರ್ಯಕ್ರಮವನ್ನು ಇಂದು ಆಯೋಜಿಸಿದ್ದು, ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು ಸಂತಸ ತಂದಿದೆ.
ಕಾರಣ ಜಿಲ್ಲೆಯಲ್ಲಿರುವ ಎಲ್ಲಾ ಸಹಕಾರ ಸಂಘಗಳು ತಮ್ಮ ಸಂಸ್ಥೆಗಳು ಹಾಗೂ ಸರ್ಕಾರಿ ರಸ್ತೆ, ಆಟದ ಮೈದಾನ, ಉದ್ಯಾನವನ ಹಾಗೂ ಗ್ರಾಮ ಪಂಚಾಯತ ಈ ರೀತಿ ವಿವಿಧ ಸ್ಥಳಗಳಲ್ಲಿ ವರ್ಷಾಧ್ಯಂತ ಸ್ವಚ್ಚತೆಯನ್ನು ಕೈಕೊಳ್ಳಲು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗದಗ ಜಿಲ್ಲಾ ಸಹಕಾರ ಯೂನಿಯನ್ದ ಅಧ್ಯಕ್ಷರಾದ ಸಿ. ಎಂ. ಪಾಟೀಲ ವಹಿಸಿ ಮಾತನಾಡುತ್ತಾ ದೇಶ, ರಾಜ್ಯ, ಜಿಲ್ಲೆ, ತಾಲೂಕು ಹಾಗೂ ನಮ್ಮ ಹಳ್ಳಿಗಳಿಂದ ಸ್ವಚ್ಚತೆ ಪ್ರಾರಂಭವಾಗಬೇಕು. ಸ್ವಚ್ಚತೆ ಮತ್ತು ನೈರ್ಮಲ್ಯ ಬಹಳ ಪ್ರಮುಖ. ನಮ್ಮ ಮನೆಯನ್ನು ಹೇಗೆ ನಾವು ಸ್ವಚ್ಚವಾಗಿ ಇಟ್ಟುಕೊಳ್ಳುತ್ತೇವೆಯೋ ಹಾಗೇ ನಮ್ಮ ಸಮಾಜ ಹಾಗೂ ಗ್ರಾಮವನ್ನು ಸ್ವಚ್ಚವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಅಂತರಾಷ್ಟ್ರೀಯ ಸಹಕಾರ ವರ್ಷ 2025 ರ ಪ್ರಯುಕ್ತ ಗದಗ ಜಿಲ್ಲೆಯಲ್ಲಿ ಮಹಾಮಂಡಳದ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಇಂದು “ಸಹಕಾರದಿಂದ ಸ್ವಚ್ಚತಾ ಅಭಿಯಾನ” ಪ್ರಾರಂಭಿಸಲಾಗಿದ್ದು ಅದೇ ರೀತಿ ಜೂನ್ ತಿಂಗಳಿನಲ್ಲಿ “ಏಕ್ ಪೇಡ ಮಾ ಕಿ ನಾಮಸೇ” ಹೆಸರಿನಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು ಆ ಕಾರ್ಯಕ್ರಮದಲ್ಲಿಯೂ ಕೂಡಾ ಇದೇ ರೀತಿ ಹೆಚ್ಚಿನ ಸಂಖ್ಯೆಯಲ್ಲಿ ತಾವೆಲ್ಲರೂ ಭಾಗವಹಿಸಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಸಹಕಾರ ಯೂನಿಯನ್ದ ನಿರ್ದೇಶಕರಾದ ಎಸ್. ಕೆ. ಕುರಡಗಿ, ಮರ್ಚಂಟ್ಸ್ ಅರ್ಬನ್ ಬ್ಯಾಂಕ್ ಲಿ., ಗದಗ ಇದರ ಅಧ್ಯಕ್ಷರಾದ ಕೆ. ಎಸ್. ಚಟ್ಟಿ, ಸಹಕಾರ ಸಂಘಗಳ ಉಪನಿಬಂಧಕಿಯರಾದ ಶ್ರೀಮತಿ ಎಸ್. ಎಸ್. ಕಬಾಡೆ, ರೋಣ, ಶಿರಹಟ್ಟಿ, ಮತ್ತು ನರಗುಂದ ತಾಲೂಕಿನ ಸಹಕಾರ ಅಭಿವೃದ್ಧಿ ಅಧಿಕಾರಿಗಳಾದ ಪ್ರಶಾಂತ ಮುಧೋಳ, ಕೆ.ಸಿ. ಕೂಸನೂರಮಠ, ಪ್ರಕಾಶ ನವಲಗುಂದ, ಕೆ.ಸಿ.ಸಿ. ಬ್ಯಾಂಕ್ ಲಿ., ಗದಗ ಇದರ ಮ್ಯಾನೇಜರಾದ ಶ್ರೀಮತಿ ಆರ್. ಎಸ್. ಕಟ್ಟಿ, ಪ್ರಭಾರ ಜಿಲ್ಲಾ ನಿಯಂತ್ರಣಾಧಿಕಾರಿಗಳಾದ ಎಸ್. ವ್ಹಿ. ಚಳಗೇರಿ ಹಾಗೂ ಧಾರವಾಡ ಹಾಲು ಒಕ್ಕೂಟದ ಜಿಲ್ಲಾ ಮುಖ್ಯಸ್ಥರಾದ ಡಾ. ಪ್ರಸನ್ನ ಪಟ್ಟೇದ ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ವಿಸ್ತರಣಾಧಿಕಾರಿಗಳು ಉಪಸ್ಥಿತರಿದ್ದರು.
ತರಬೇತಿ ಕಾರ್ಯಾಗಾರದಲ್ಲಿ ಪದವಿ ಪೂರ್ವ ಕಾಲೇಜ, ಗದಗ ಇದರ ಅರ್ಥಶಾಸ್ತç ಉಪನ್ಯಾಸಕರು, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಇದರ ಮುಖ್ಯಸ್ಥಾರಾದ ಬಸವರಾಜ ಮಲ್ಲಾಪೂರ ವಿಶೇಷ ಉಪನ್ಯಾಸಕರಾಗಿ ಆಗಮಿಸಿ ಸ್ವಚ್ಚತೆ, ನೈರ್ಮಲ್ಯ, ವಾಯು ಮಾಲಿನ್ಯ, ಜಲ ಮಾಲಿನ್ಯ ಭೂ ಮಾಲಿನ್ಯ, ಉಸಿರಾಡಿಸುವ ಶುದ್ಧ ಗಾಳಿ, ಪರಿಸರ ಕಾಪಾಡುವಲ್ಲಿ ಪ್ರಜೆಗಳ ಪಾತ್ರ, ಸಾಮಾಜಿಕ ಜವಾಬ್ದಾರಿ, ನೈತಿಕ ಮೌಲ್ಯಗಳು, ಆರೋಗ್ಯದ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು.
ಪ್ರಾರಂಭದಲ್ಲಿ ಗದಗ ಜಿಲ್ಲಾ ಸಹಕಾರ ಯೂನಿಯನ್ನಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಎಸ್. ಕರಿಯಪ್ಪನವರ ಇವರು ಸ್ವಾಗತಿಸಿ ನಿರೂಪಿಸಿದರು ನಂತರ ಮಹಿಳಾ ಸಹಕಾರ ಶಿಕ್ಷಕಿಯರಾದ ಶ್ರೀಮತಿ ರಶೀದಾಬಾನು ಸಿ. ಯಲಿಗಾರ ಇವರು ವಂದಿಸಿದರು.
ಹಿಂದೂಸ್ತಾನ್ ಸಮಾಚಾರ್ / Lalita MP