ಅರಾಭಿಕೊತ್ತನೂರು ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ
ಅರಾಭಿಕೊತ್ತನೂರು ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ
ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಆರಂಭೋತ್ಸವದಲ್ಲಿ ಮಕ್ಕಳಿಗೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ ಸಮವಸ್ತç, ಪಠ್ಯ ಪುಸ್ತಕ ವಿತರಿಸಿದರು.


ಕೋಲಾರ, ೩೧ ಮೇ (ಹಿ.ಸ) :

ಆ್ಯಂಕರ್ : ಸರ್ಕಾರಿ ಶಾಲೆಗಳಲ್ಲಿ ಸಿಗುವ ಗುಣಮಟ್ಟದ ಶಿಕ್ಷಣ,ಉಚಿತ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ ಮಕ್ಕಳನ್ನು ದಾಖಲಿಸಿ ಎಂದು ಪೋಷಕರಿಗೆ ಡಿಡಿಪಿಐ ಕೃಷ್ಣಮೂರ್ತಿ ಕರೆ ನೀಡಿ, ಸಿಎಸ್‌ಆರ್ ನಿಧಿ ಬಳಸಿಕೊಂಡು ಸರ್ಕಾರಿ ಶಾಲೆಗಳನ್ನು ಮತ್ತಷ್ಟು ಆಕರ್ಷಣೀಯಗೊಳಿಸಿ ಎಂದು ಶಿಕ್ಷಕರಿಗೆ, ಎಸ್‌ಡಿಎಂಸಿ ಸದಸ್ಯರಿಗೆ ಸಲಹೆ ನೀಡಿ, ಶಾಲೆಗೆ ಗ್ರಾ.ಪಂ ಅಧ್ಯಕ್ಷರು ನೀಡುತ್ತಿರುವ ಸಹಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲಾರಂಭದ ಮೊದಲ ದಿನ ಶಾಲೆಗಳಲ್ಲಿ ನಡೆಸಿರುವ ಸಿದ್ದತೆ,ಸಂಭ್ರಮದ ಕುರಿತು ಪರಿಶೀಲಿಸಲು ಮಿಂಚಿನ ಸಂಚಾರ ನಡೆಸಿದ ಅವರು, ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳನ್ನು ಸ್ವಾಗತಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳಿಗೆ ಉಚಿತ ಸಮವಸ್ತç ಹಾಗೂ ಪಠ್ಯ ಪುಸ್ತಕ ವಿತರಿಸಿ ಮಾತನಾಡಿದರು.

ಸರ್ಕಾರ ಶಾಲಾರಂಭದ ದಿನ ಮಕ್ಕಳಿಗೆ ಪಠ್ಯಪುಸ್ತಕ,ಸಮವಸ್ತç ವಿತರಿಸಲು ಸೂಚಿಸಿದೆ, ಜತೆಗೆಶಾಲೆಗೆ ಬರುವ ಮಕ್ಕಳಿಗೆ ಇಲ್ಲಿ ಸಂಭ್ರಮದ ಕಲಿಕೆಗೆ ಪೂರಕ ವಾತಾವರಣ ಸೃಷ್ಟಿಸಲು ಕ್ರಮವಹಿಸಿದ್ದು, ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಬೇಕು ಎಂದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಮತ್ತಷ್ಟು ಉತ್ತಮಪಡಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ, ನೀವು ಬದ್ದತೆಯಿಂದ ಕೆಲಸ ಮಾಡಬೇಕು, ೮ನೇ ತರಗತಿಗೆ ಬರುವ ಮಕ್ಕಳ ಕಲಿಕೆ ಕುರಿತು ಗಮನಹರಿಸಿ, ಅವರನ್ನು ಆರಂಭದಿAದಲೇ ಕಲಿಕಾದಾರಿಗೆ ತನ್ನಿ ಎಂದರು.

ಈ ಬಾರಿ ಕೋಲಾರ ಜಿಲ್ಲೆ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಸ್ವಲ್ಪ ಸುಧಾರಣೆ ಕಂಡಿದ್ದರೂ, ನಿರೀಕ್ಷಿಸಿದಷ್ಟು ಸಾಧನೆಯಾಗಿಲ್ಲ ಎಂದ ಅವರು, ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲಾರಂಭದಿ0ದಲೇ ಎಸ್ಸೆಸ್ಸೆಲ್ಸಿ ಮಕ್ಕಳಲ್ಲಿ ಕಲಿಕೆಯಲ್ಲಿ ಹಿಂದುಳಿದ, ಸಾಧಾರಣ ಮತ್ತು ಕಲಿಕೆಯಲ್ಲಿ ಸಾಧಕ ಮಕ್ಕಳನ್ನು ಪಟ್ಟಿ ಮಾಡಿ, ಅವರ ಸಾಮರ್ಥ್ಯಕ್ಕೆ ತಕ್ಕಂತೆ ನಿಮ್ಮ ಬೋಧನಾ ವಿಧಾನ ಅಳವಡಿಸಿಕೊಳ್ಳಿ ಎಂದರು.

ಶಾಲೆಯಲ್ಲಿ ಶೌಚಾಲಯ ಬಳಸಿದ ನಂತರ ನೀರು ಹಾಕುವುದನ್ನು ಮರೆಯದಿರಿ, ಸ್ವಚ್ಚತೆ ಅತಿ ಮುಖ್ಯ, ಅನೇಕ ರೋಗಗಳಿಂದ ಮುಕ್ತರಾಗಿ ಕಲಿಕೆ ಸದೃಢಗೊಳ್ಳಲು ಆರೋಗ್ಯವೂ ಅತಿ ಮುಖ್ಯ ಎಂದು ಕಿವಿಮಾತು ಹೇಳಿ, ಕೋವಿಡ್ ಮಾರಿ ಮತ್ತೆ ಬರುವ ಆತಂಕ ರಾಜ್ಯದಲ್ಲಿ ಕೆಲವು ಕಡೆ ಕಂಡು ಬಂದಿದ್ದು, ನೀವು ಮುನ್ನಚ್ಚರಿಕೆ ವಹಿಸಿ ಎಂದರು.

ಶೌಚಾಲಯ ಸ್ವಚ್ಚತೆ, ಅಡುಗೆ ಕೋಣೆ ಸುಸಜ್ಜಿತವಾಗಿರಬೇಕು, ಗ್ರಂಥಾಲಯ, ಪ್ರಾಯೋಗಾಲಯಗಳನ್ನು ಸುಸ್ಥಿತಿಯಲ್ಲಿಟ್ಟು, ಅದರ ಬಳಕೆ ಮಾಡಬೇಕು ಎಂದು ಶಿಕ್ಷಕರಿಗೆ ತಾಕೀತು ಮಾಡಿದರು.

ಶಿಕ್ಷಕರು ಮಕ್ಕಳಲ್ಲಿ ಶಾಲೆಯನ್ನು ದೇಗುಲವೆಂಬAತೆ ಬಿಂಬಿಸಬೇಕು, ಮಕ್ಕಳು ಸಹಾ ತಮ್ಮ ಪಠ್ಯಕ್ಕೆ ಸಂಬAಧಿಸಿದ ಅನುಮಾನಗಳನ್ನು ಧೈರ್ಯವಾಗಿ ಶಿಕ್ಷಕರಿಗೆ ಹೇಳಿ ಪರಿಹರಿಸಿಕೊಳ್ಳಬೇಕು ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾಂಭ ಮುನಿರಾಜು ಮಾತನಾಡಿ, ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಗೆ ಬರುವ ಮಕ್ಕಳಿಗೆ ಗ್ರಾಮ ಪಂಚಾಯಿತಿಯಿ0ದ ನಿರಂತರವಾಗಿ ಆಟೋ ಸೌಲಭ್ಯ ಒದಗಿಸಲು ಈಗಾಗಲೇ ಅಂಗೀಕಾರ ನೀಡಿದ್ದು, ಈ ಶೈಕ್ಷಣಿಕ ವರ್ಷದಿಂದಲೇ ಈ ಸೌಲಭ್ಯ ಸಿಗಲಿದೆ ಎಂದರು.

ಸರ್ಕಾರಿ ಶಾಲೆ ಉಳಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿಗ್ರಾಮ ಪಂಚಾಯಿತಿಯಿAದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ ಅವರು, ಶಾಲೆಯ ಹೆಣ್ಣು ಮಕ್ಕಳಿಗೆ ಹೆಚ್ಚುವರಿ ಶೌಚಾಲಯ ಕಟ್ಟಿಕೊಡಲು ಸಹಾ ಗ್ರಾಮ ಪಂಚಾಯಿತಿ ಅನುಮೋದನೆ ನೀಡಿದೆ ಎಂದು ತಿಳಿಸಿ ಮಕ್ಕಳಿಗೆ ಶುಭ ಕೋರಿದರು.

ಪ್ರಭಾರ ಮುಖ್ಯಶಿಕ್ಷಕಿ ಸಿದ್ದೇಶ್ವರಿ ಮಾತನಾಡಿ, ದೂರದ ಹಳ್ಳಿಗಳಿಂದ ಬರುವ ಶಾಲೆಯ ಮಕ್ಕಳಿಗೆ ಆಟೋ ಸೌಲಭ್ಯ ಒದಗಿಸಿದ್ದಕ್ಕಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾಂಭ ಮುನಿರಾಜು, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶಾಲಿನಿ ಅವರಿಗೆ ಧನ್ಯವಾದ ಸಲ್ಲಿಸಿದರು.

ಸಿಆರ್‌ಪಿ ಬಸವರಾಜ್ ಮಾತನಾಡಿ, ಪ್ರೌಢಶಾಲೆಯಲ್ಲಿ ಬಡ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ದಾನಿಗಳ ನೆರವಿನಿಂದ ಅನೇಕ ಸೌಲಭ್ಯಗಳನ್ನು ಮಕ್ಕಳಿಗೆ ಒದಗಿಸಲಾಗುತ್ತಿದೆ, ಈ ಬಾರಿ ಬೈಸಿಕಲ್ ನೀಡಲು ದಾನಿಗಳು ಮುಂದೆ ಬಂದಿದ್ದು, ಇದರ ಸದುಪಯೋಗದೊಂದಿಗೆ ಶೈಕ್ಷಣಿಕ ಪ್ರಗತಿಯೂ ತೋರಬೇಕೆಂದರು.

ಕಾರ್ಯಕ್ರಮದಲ್ಲಿ ತಾಲ್ಲೂಕಿನ ಪೆಮ್ಮಶೆಟ್ಟಿಹಳ್ಳಿ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಆಂಜಿನಪ್ಪ, ಶಿಕ್ಷಕರಾದ ಎಂ.ಆರ್.ಗೋಪಾಲಕೃಷ್ಣ, ಭವಾನಿ, ಶ್ವೇತಾ,ಸುಗುಣಾ, ಫರೀದಾ, ವೆಂಕಟರೆಡ್ಡಿ, ಕೆ.ಲೀಲಾ, ಸಿ.ಎಲ್.ಶ್ರೀನಿವಾಸಲು, ರಮಾದೇವಿ,ಡಿ.ಚಂದ್ರಶೇಖರ್, ಪೋಷಕರಾದ ಶಾಂತಮ್ಮ ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ : ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಆರಂಭೋತ್ಸವದಲ್ಲಿ ಮಕ್ಕಳಿಗೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ ಸಮವಸ್ತç, ಪಠ್ಯ ಪುಸ್ತಕ ವಿತರಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande