ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ, 31 ಮೇ (ಹಿ.ಸ.) : ಆ್ಯಂಕರ್ : ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾ
ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ : ಅರ್ಜಿ ಆಹ್ವಾನ


ಕೊಪ್ಪಳ, 31 ಮೇ (ಹಿ.ಸ.) :

ಆ್ಯಂಕರ್ : ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದ್ದು, ಇಲಾಖಾ ವೆಬ್‍ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ sevಚಿsiಟಿಜhuseಡಿviಛಿes.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೊಂದು ಪದವಿ ಪಡೆದಿರಬೇಕು. ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ರೂ.5 ಲಕ್ಷ ಮೀರಿರಬಾರದು. ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳು, ಪ್ರವರ್ಗ ಹಾಗೂ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳು, ದಿನಾಂಕ ಮತ್ತು ಸಮಯವನ್ನು ನಂತರದ ದಿನಗಳಲ್ಲಿ ಇಲಾಖಾ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ : 8050370006 ಗೆ ಸಾರ್ವಜನಿಕ ರಜಾ ದಿನಗಳನ್ನು ಹೊರತು ಪಡಿಸಿ ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande