ಮಂಗಳೂರು, 31 ಮೇ (ಹಿ.ಸ.) :
ಆ್ಯಂಕರ್ : ಸರ್ಕಾರದ ಪ್ರತಿನಿಧಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವನಾಗಿ ನನಗೆ ಯಾವುದೇ ಸಮುದಾಯದವರ ಹತ್ಯೆಯಾದರೂ ಆಕ್ರೋಶ ಬರುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಹಿಂದೂ, ಮುಸ್ಲಿಂ ಎಂದು ಸಮುದಾಯಗಳನ್ನು ನೋಡಿ ಆಕ್ರೋಶ ಹೊರಹಾಕುವವರು ನಾವಲ್ಲ. ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ ಕಾಪಾಡಲು ನಮ್ಮ ಸರ್ಕಾರ ಆದ್ಯತೆ ನೀಡುತ್ತದೆ. ಕೆಲವು ಸಂಘಟನೆಗಳು ಮತ್ತು ಪಕ್ಷಗಳು ಉದ್ದೇಶಪೂರ್ವಕವಾಗಿ ರಾಜಕೀಯ ಬಂಡವಾಳಕ್ಕಾಗಿ ಇಂತಹ ವಿಷಯದಲ್ಲಿ ಆಕ್ರೋಶ ಹೊರಹಾಕುತ್ತಿವೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa