ಕಲಬುರಗಿ, 31 ಮೇ (ಹಿ.ಸ.) :
ಆ್ಯಂಕರ್ : ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಪ್ರತಿಪಕ್ಷ ನಾಯಕ ಛಲವಾದಿ ನಾರಯಣಸ್ವಾಮಿ ಅವಹೇಳನ ಹೇಳಿಕೆ ಖಂಡಿಸಿ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕಲಬುರಗಿ ನಾಗರಿಕ ಸಮಿತಿ, ದಲಿತ ಸಂಘಟನೆಗಳು ಹಾಗೂ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡ ಪ್ರತಿಭಟನೆಯು ನಗರದ ಜಗತ್ ವೃತ್ತದಿಂದ ಡಿಸಿ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಬಳಿಕ ಡಿಸಿ ಕಚೇರಿ ಎದರು ಬೃಹತ್ ಬಹಿರಂಗ ಸಮಾವೇಶ ಕೈಗೊಳ್ಳಲಾಯಿತು.
ಕೈ ಶಾಸಕರು ಮಾಜಿ ಶಾಸಕರು, ದಲಿತ ಹೋರಾಟಗಾರ ಮಾವಳ್ಳಿ ಶಂಕರ್ ಸೇರಿದಂತೆ ಸಾವಿರಾರು ಜನ ಭಾಗಿಯಾಗಿ ಛಲವಾದಿ ನಾರಯಣಸ್ವಾಮಿ ಹಾಗೂ ರವಿಕುಮಾರ್ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Samarth biral