ರೈತರ ಸಮಸ್ಯೆಗಳಿಗೆ ಸೂಕ್ತ ಸಲಹೆ ನೀಡಲು ಕಾರ್ಯಾಗಾರ
ಗದಗ, 31 ಮೇ (ಹಿ.ಸ.) : ಆ್ಯಂಕರ್ : ಕೃಷಿ ಇಲಾಖೆ, ಕೃಷಿ ವಿಶ್ವ ವಿದ್ಯಾಲಯ ಹಾಗೂ ಕೃಷಿ ವಿಜ್ಞಾನ ಕೇಂದ್ರಗಳ ಅಂತಿಮ ಗುರಿಯು ರೈತರಿಗೆ ಸಕಾಲದಲ್ಲಿ ತಾಂತ್ರಿಕ ಮಾಹಿತಿ ಒದಗಿಸುವುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ ತಾರಾಮಣಿ ತಿಳಿಸಿದರು. ರೈತರ ಸಮಸ್ಯೆಗಳಿಗೆ ಸೂಕ್ತ ಸಲಹೆಗಳನ್ನು ನೀಡಲು ಕಾರ
ಪೋಟೋ


ಗದಗ, 31 ಮೇ (ಹಿ.ಸ.) :

ಆ್ಯಂಕರ್ : ಕೃಷಿ ಇಲಾಖೆ, ಕೃಷಿ ವಿಶ್ವ ವಿದ್ಯಾಲಯ ಹಾಗೂ ಕೃಷಿ ವಿಜ್ಞಾನ ಕೇಂದ್ರಗಳ ಅಂತಿಮ ಗುರಿಯು ರೈತರಿಗೆ ಸಕಾಲದಲ್ಲಿ ತಾಂತ್ರಿಕ ಮಾಹಿತಿ ಒದಗಿಸುವುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ ತಾರಾಮಣಿ ತಿಳಿಸಿದರು.

ರೈತರ ಸಮಸ್ಯೆಗಳಿಗೆ ಸೂಕ್ತ ಸಲಹೆಗಳನ್ನು ನೀಡಲು ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಇದರಲ್ಲಿ ಕೃಷಿ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ಕೃಷಿಯಲ್ಲಾದ ನೂತನ ತಾಂತ್ರಿಕತೆಗಳ ಕುರಿತು ಪರಸ್ಪರ ಚರ್ಚಿಸಿ ಮಾಹಿತಿ ನೀಡಿದರು.

ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರ, ಹುಲಕೋಟಿಯಲ್ಲಿ ಕೃಷಿ ಇಲಾಖೆ, ಕೃಷಿ ವಿಶ್ವ ವಿದ್ಯಾಲಯ, ಧಾರವಾಡ ಹಾಗೂ ಕೃಷಿ ವಿಜ್ಞಾನ ಕೇಂದ್ರ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಾಗಾರವನ್ನು ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ ತಾರಾಮಣಿ ಜಿ.ಎಚ್ ಉದ್ಘಾಟಿಸಿದರು.

ಡಾ ಸುಧಾ ಮಂಕಣಿ, ಮುಖ್ಯಸ್ಥರು, ಕೆ.ಎಚ್ ಪಾಟೀಲ ಕೃಷಿ ವಿಜ್ಞಾನ ಕೇಂದ್ರ, ಹುಲಕೋಟಿ ಇವರು “ವಿಕಸಿತ ಕೃಷಿ ಅಭಿಯಾನ”ದ ದಿನಾಂಕವಾರು, ತಾಲ್ಲೂಕುವಾರು ವೇಳಾಪಟ್ಟಿಯ ವಿವರಗಳನ್ನು ತಿಳಿಸಿದರು. ಅಭಿಯಾನದ ಯಶಸ್ಸಿಗೆ ಎಲ್ಲ ತಾಲ್ಲೂಕುಗಳ ರೈತ ಸಂಪರ್ಕ ಕೇಂದ್ರಗಳ ಮುಖ್ಯಸ್ಥರು ಹಾಗೂ ಕೃಷಿ ಇಲಾಖೆಯ ಸಿಬ್ಬಂದಿಯು ಸಂಪೂರ್ಣ ಸಹಕಾರ ನೀಡಲು ಜಂಟಿ ಕೃಷಿ ನಿರ್ದೇಶಕರು ಸೂಚಿಸಿದರು.

ಜಿಲ್ಲೆಯ ಮಳೆ ಬೆಳೆ ಪರಿಸ್ಥಿತಿ, ವಾತಾವರಣ, ಬೆಳೆಗಳಿಗೆ ತಗಲುವ ಕೀಟ, ರೋಗ ಬಾಧೆ ಇತ್ಯಾದಿಗಳ ಕುರಿತು ಕಾರ್ಯಾಗಾರದಲ್ಲಿ ಚರ್ಚಿಸಿ ಮಾಹಿತಿ ನೀಡಲಾಯಿತು. ಕೃಷಿ ಇಲಾಖೆಯಿಂದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವುದು, ಸಕಾಲದಲ್ಲಿ ರೈತರಿಗೆ ಪರಿಕರಗಳನ್ನು ಪೂರೈಸುವುದು, ವಿವಿಧ ಪರಿಕರಗಳ ಗುಣಮಟ್ಟ ಕಾಪಾಡಲು ಗುಣನಿಯಂತ್ರಣ ಅಭಿಯಾನ ಕೈಗೊಳ್ಳುವುದು, ಸಮಸ್ಯಾತ್ಮಕ ಕ್ಷೇತ್ರಗಳಿಗೆ ವಿಜ್ಞಾನಿಗಳೊಂದಿಗೆ ಭೇಟಿ ನೀಡಿ ಪರಿಹಾರ ಒದಗಿಸುವುದು, ಒಟ್ಟಾರೆಯಾಗಿ ರೈತರ ನೆರವಿಗೆ ಇಲಾಖೆ ಸದಾ ಸನ್ನದ್ಧವಾಗಿದೆ ಎಂದು ಗದಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರಾದ ಶ್ರೀಮತಿ ತಾರಾಮಣಿ ಜಿ.ಹೆಚ್. ತಿಳಿಸಿದರು.

ಉಪ ಕೃಷಿ ನಿರ್ದೇಶಕರು ಗದಗ, ರೋಣ, ಜಿಲ್ಲೆಯ ಎಲ್ಲ ಸಹಾಯಕ ಕೃಷಿ ನಿರ್ದೇಶಕರು ಹಾಗೂ ತಾಂತ್ರಿಕ ಸಿಬ್ಬಂದಿಯು ಸಕಾಲದಲ್ಲಿ ರೈತರಿಗೆ ಕೃಷಿ ಪರಿಕರಗಳು, ಉಪಕರಣಗಳು ದೊರೆಯುವಂತೆ ಕ್ರಮ ಕೈಗೊಳ್ಳಲು ತಿಳಿಸಿದರು. ಅಲ್ಲದೇ, ಬೆಳೆಗಳಿಗೆ ಬರುವ ಕೀಟ, ರೋಗಗಳ ನಿರ್ವಹಣೆ ಕುರಿತು ಮತ್ತು ನೂತನ ಕೃಷಿ ತಾಂತ್ರಿಕತೆಗಳ ಕುರಿತು ಸಕಾಲಕ್ಕೆ ರೈತರಿಗೆ ತಿಳಿಸಬೇಕು ಎಂದು ನಿರ್ದೇಶಿಸಿದರು.

ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಡಾ.ಮೊಟಗಿ, ತಳಿ ವಿಜ್ಞಾನಿ ಇವರು ಹೆಸರು, ತೊಗರಿ, ಸೂರ್ಯಕಾಂತಿ, ಮತ್ತಿತರೆ ಬೆಳೆಗಳ ಸುಧಾರಿತ, ರೋಗ, ಕೀಟ ನಿರೋಧಕ ಶಕ್ತಿಯನ್ನು ಹೊಂದಿದ ಹಾಗೂ ನವೀನ ತಳಿಗಳ ಕುರಿತು ಮಾಹಿತಿ ನೀಡಿದರು. ಹೆಚ್ಚು ಮಳೆಯಾದ ಪ್ರದೇಶದಲ್ಲಿ ಕೈಗೊಳ್ಳಬೇಕಾದ ಕೃಷಿ ತಾಂತ್ರಿಕತೆಗಳ ಕುರಿತು ಡಾ:: ಎಂ.ಪಿ.ಪೋದ್ದಾರ ಹಾಗೂ ಈ ಭಾಗದಲ್ಲಿ ಬೆಳೆದಿರುವ ಬೆಳೆಗೆ ಬರುವ ರೋಗಗಳ ನಿರ್ವಹಣಾ ಕ್ರಮಗಳ ಕುರಿತು ಡಾ.ಶಿವಲಿಂಗಪ್ಪ ಹೋಟಕರ ಚರ್ಚಿಸಿದರು. 2024ರ ಹಿಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳಲ್ಲಿ ಕ್ಷೇತ್ರ ಪ್ರಯೋಗಗಳನ್ನು ಕೈಗೊಂಡಿರುವ ಕುರಿತು ಚರ್ಚಿಸಲಾಯಿತು.

ಕೃಷಿ ವಿಜ್ಞಾನಿ ಡಾ ಶಿವಲಿಂಗಪ್ಪ ಹೋಟಕರ, ಡಾ::ಎಸ್.ಎಲ್.ಪಾಟೀಲ, ಡಾ ಶ್ರೀಮತಿ ಹೇಮಾವತಿ ಹಿರೇಗೌಡರ, ಡಾ ಎನ್.ಎಚ್.ಬಂಡಿ, ಹಾಗೂ ಜಿಲ್ಲೆಯ ಉಪ ಕೃಷಿ ನಿರ್ದೇಶಕರು ಗದಗ, ರೋಣ, ಜಂಟಿ ಕೃಷಿ ನಿರ್ದೇಶಕರ ಕಚೇರಿಯ ತಾಂತ್ರಿಕ ಅಧಿಕಾರಿಗಳು ಮತ್ತು ಎಲ್ಲ ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರು, ರೈತ ಸಂಪರ್ಕ ಕೇಂದ್ರಗಳ ಕೃಷಿ ಅಧಿಕಾರಿಗಳು, ಸಹಾಯಕ ಕೃಷಿ ಅಧಿಕಾರಿಗಳು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande