ಬೆಂಬಲ ಬೆಲೆಯೊಂದಿಗೆ ಜೋಳ ಖರೀಧಿಗೆ ಪ್ರಯತ್ನ- ಸಚಿವ ಎನ್ ಎಸ್ ಬೋಸರಾಜು
ಬೆಂಗಳೂರು, 1 ಜೂನ್ (ಹಿ.ಸ.) ಆ್ಯಂಕರ್: ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಯ ಮುಂಗಾರು ಮತ್ತು ಹಿಂಗಾರು 2024-25ನೇ ಸಾಲಿನ ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಡಿ ಜೋಳ ಖರೀದಿ ಪ್ರಕ್ರಿಯೆಯಲ್ಲಿ ಲೋಪದೊಷಗಳಾಗದಂತೆ ಅಗತ್ಯ ಕ್ರಮ ಕೈಗೊಂಡು‌ ಬೆಂಬಲ ಬೆಲೆ ನಿಗಧಿ ಕುರಿತು ಎಂದು ಆಹಾರ ಮತ್ತು ನಾಗರಿಕ ಸ
Efforts to purchase jowar at support price - Minister NS Bosaraju


ಬೆಂಗಳೂರು, 1 ಜೂನ್ (ಹಿ.ಸ.)

ಆ್ಯಂಕರ್: ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಯ ಮುಂಗಾರು ಮತ್ತು ಹಿಂಗಾರು 2024-25ನೇ ಸಾಲಿನ ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಡಿ ಜೋಳ ಖರೀದಿ ಪ್ರಕ್ರಿಯೆಯಲ್ಲಿ ಲೋಪದೊಷಗಳಾಗದಂತೆ ಅಗತ್ಯ ಕ್ರಮ ಕೈಗೊಂಡು‌ ಬೆಂಬಲ ಬೆಲೆ ನಿಗಧಿ ಕುರಿತು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವರಾದ ಕೆಎಚ್ ಮುನಿಯಪ್ಪ, ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಹೆಚ್ ಕೆ ಪಾಟೀಲ್, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಪ್ರಕಾಶ್ ಪಾಟೀಲ್ ಹಾಗೂ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ಎಸ್ ಬೋಸರಾಜು ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಸಿದರು.

ಬೆಂಗಳೂರಿನಲ್ಲಿ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜೋಳ ಖರೀದಿ ಪ್ರಕ್ರಿಯೆ ಕುರಿತು ನಡೆದ ಸಭೆಯಲ್ಲಿ ಮಾಹಿತಿ ಪಡೆದರು.

2024-25ನೇ ಸಾಲಿನಲ್ಲಿ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಮತ್ತು ಹಿಂಗಾರು ಹಂಗಾಮಿಗೆ ರೈತರ ಜೋಳಗಳನ್ನು ಖರೀದಿಸಲು ಅವರ ಬೇಡಿಕೆಗೆ ಅನುಗುಣವಾಗಿ ಬೆಲೆ ನಿಗಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ರೈತರು ಬೆಳೆದ ಜೋಳಕ್ಕೆ ಬೆಂಬಲ‌ಬೆಲೆ ನಿಗಧಿಪಡಿಸಿ ಖರೀಧಿಸುವ ಮೂಲಕ ರೈತರನ್ನು ಸಂರಕ್ಷಿಸುವದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಿ, ಮುನ್ನೆಚ್ಚರಿ ಕಾರ್ಯಕ್ರಮಗಳೊಂದಿಗೆ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಸಿಂಧನೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ,

ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾದ ನಿತೀಶ ಕೆ. ಸೇರಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande