ಈಶಾನ್ಯ ಭಾರತದಲ್ಲಿ ಭಾರೀ ಮಳೆ: ಕೇಂದ್ರ ಗೃಹ ಸಚಿವರಿಂದ ತುರ್ತು ಸಭೆ
ನವದೆಹಲಿ, 1 ಜೂನ್ (ಹಿ.ಸ.): ಆ್ಯಂಕರ್:ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆಯಿಂದಾಗಿ ಕನಿಷ್ಠ 32 ಜನರು ಪ್ರಾಣ ಕಳೆದುಕೊಂಡಿದ್ದು, ಆಸ್ತಿಪಾಸ್ತಿಗೆ ಭಾರಿ ನಷ್ಟವಾಗಿದೆ. ಅಸ್ಸಾಂ, ಅರುಣಾಚಲ ಪ್ರದೇಶ, ಸಿಕ್ಕಿಂ, ಮೇಘಾಲಯ, ನಾಗಾಲ್ಯಾಂಡ್ ಹಾಗೂ ಮಿಜೋರಾಂಗಳಲ್ಲಿ ಮನೆಗಳು ಕುಸಿದು, ಸಾರಿಗೆ ಸಂಪರ್ಕ ವ್ಯತ್ಯಯಗೊಂಡಿ
Amita  sha


ನವದೆಹಲಿ, 1 ಜೂನ್ (ಹಿ.ಸ.):

ಆ್ಯಂಕರ್:ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆಯಿಂದಾಗಿ ಕನಿಷ್ಠ 32 ಜನರು ಪ್ರಾಣ ಕಳೆದುಕೊಂಡಿದ್ದು, ಆಸ್ತಿಪಾಸ್ತಿಗೆ ಭಾರಿ ನಷ್ಟವಾಗಿದೆ. ಅಸ್ಸಾಂ, ಅರುಣಾಚಲ ಪ್ರದೇಶ, ಸಿಕ್ಕಿಂ, ಮೇಘಾಲಯ, ನಾಗಾಲ್ಯಾಂಡ್ ಹಾಗೂ ಮಿಜೋರಾಂಗಳಲ್ಲಿ ಮನೆಗಳು ಕುಸಿದು, ಸಾರಿಗೆ ಸಂಪರ್ಕ ವ್ಯತ್ಯಯಗೊಂಡಿದೆ.

ಮಳೆ ಹಾನಿ ಪರಿಸ್ಥಿತಿ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಸ್ಸಾಂ, ಸಿಕ್ಕಿಂ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿಗಳು ಹಾಗೂ ಮಣಿಪುರದ ರಾಜ್ಯಪಾಲರೊಂದಿಗೆ ಮಾತುಕತೆ ನಡೆಸಿದರು. ಕೇಂದ್ರದಿಂದ ಸಾಧ್ಯವಿರುವ ಎಲ್ಲ ರೀತಿಯ ಸಹಾಯ ನೀಡುವುದಾಗಿ ಭರವಸೆ ನೀಡಿದ್ದಾರೆ. ಸರ್ಕಾರ ಪರಿಹಾರ ಕಾರ್ಯಗಳಲ್ಲಿ ತೊಡಗಿಕೊಂಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯ ಸಾಧ್ಯತೆ ಇದ್ದು ಮುಂಜಾಗ್ರತೆ ವಹಿಸುವಂತೆ ಸೂಚಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande