ಬಳ್ಳಾರಿ, 1 ಜೂನ್ (ಹಿ.ಸ.)
ಆ್ಯಂಕರ್: ಚಿತ್ರನಟ ಕಮಲಹಾಸನ್ ಅವರು ತಮಿಳಿನಿಂದಲೇ ಕನ್ನಡ ಭಾಷೆಯ ಹುಟ್ಟು ಮತ್ತು ಬೆಳವಣಿಗೆ ಎನ್ನುವ ಮೂಲಕ ಕನ್ನಡ ಭಾಷೆ ಮತ್ತು ಕನ್ನಡ ಭಾಷೆಯ ಇತಿಹಾಸದ ಕುರಿತು ಅವರ ಅಜ್ಞಾನವನ್ನು ಪ್ರದರ್ಶನ ಮಾಡಿದ್ದು, ಅವರು ಸಮಸ್ತ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಡಾ. ಮಹೇಶ್ವರಸ್ವಾಮಿಗಳು ತಿಳಿಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಗಡಿಗೆ ಚೆನ್ನಪ್ಪ ವೃತ್ತದಲ್ಲಿ ಭಾನುವಾರ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಕನ್ನಡ ಭಾಷೆಗೆ ಎರಡರಿಂದ ಮೂರು ಸಾವಿರ ವರ್ಷಗಳ ಸುದೀರ್ಘವಾದ ಇತಿಹಾಸವಿದೆ.
ದಕ್ಷಿಣ ಭಾರತದ ಎಲ್ಲಾ ಭಾಷೆಗಳು ದ್ರಾವಿಡ ಮತ್ತು ಸಂಸ್ಕøತ ಭಾಷೆಯಿಂದ ಹುಟ್ಟಿ - ರೂಪಾಂತರಗೊಂಡಿವೆ ಎಂದರು.
ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ)ಯ ಬಳ್ಳಾರಿ ಜಿಲ್ಲಾಧ್ಯಕ್ಷ ಜಿ. ರಾಜಶೇಖರ್ ಅವರು,
ಕಮಲಹಾಸನ್ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಅವರ ನಟನೆಯ ಎಲ್ಲಾ ಚಿತ್ರಗಳಿಗೆ ಕನ್ನಡಿಗರ ವಿರೋಧವನ್ನು ಎದುರಿಸಬೇಕು ಎಂದು ಹೇಳಿದರು.
ಪ್ರತಿಭಟನಾಕಾರರು ಕಮಲಹಾಸನ್ ಅವರ ಭಾವಚಿತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಕಲ್ಯಾಣಶ್ರೀಗಳು, ಶಂಭುಲಿಂಗ ಶ್ರೀಗಳು ಹಾಗೂ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್