10 Jun 2025, 10:02 HRS IST

ಜೀವ, ಜೀವನ ಮೌಲ್ಯ ಅರಿತು ತಂಬಾಕಿನಿಂದ ದೂರವಿರಿ
ಹೊಸಪೇಟೆ , 1 ಜೂನ್ (ಹಿ.ಸ.) ಆ್ಯಂಕರ್: ದುಶ್ಚಟಗಳಿಗೆ ದಾಸರಾಗುವ ಮುನ್ನ ನಿಮ್ಮ ಜೀವ ಮತ್ತು ಜೀವನದ ಮೌಲ್ಯ ಅರಿತರೇ ತಂಬಾಕು ಉತ್ಪನ್ನಗಳಿಂದ ದೂರವಿರಲು ಸಾಧ್ಯವಾಗಲಿದೆ ಎಂದು ಗೌರವಾನ್ವಿತ ಸಿವಿಲ್ ನ್ಯಾಯಾಧೀಶರಾದ ಪ್ರಶಾಂತ್ ನಾಗಲಾಪುರ ಹೇಳಿದ್ದಾರೆ. . ನಗರದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ
ಜೀವ, ಜೀವನ ಮೌಲ್ಯ ಅರಿತು ತಂಬಾಕುನಿಂದ ದೂರವಿರಿ


ಹೊಸಪೇಟೆ , 1 ಜೂನ್ (ಹಿ.ಸ.)

ಆ್ಯಂಕರ್: ದುಶ್ಚಟಗಳಿಗೆ ದಾಸರಾಗುವ ಮುನ್ನ ನಿಮ್ಮ ಜೀವ ಮತ್ತು ಜೀವನದ ಮೌಲ್ಯ ಅರಿತರೇ ತಂಬಾಕು ಉತ್ಪನ್ನಗಳಿಂದ ದೂರವಿರಲು ಸಾಧ್ಯವಾಗಲಿದೆ ಎಂದು ಗೌರವಾನ್ವಿತ ಸಿವಿಲ್ ನ್ಯಾಯಾಧೀಶರಾದ ಪ್ರಶಾಂತ್ ನಾಗಲಾಪುರ ಹೇಳಿದ್ದಾರೆ.

.

ನಗರದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ವಿಶ್ವ ತಂಬಾಕು ರಹಿತ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ಜಾಗೃತಿ ಜಾಥಕ್ಕೆ ಹಸಿರು ನಿಶಾನೆ ತೊರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ತಂಬಾಕು ಮತ್ತು ನಿಕೋಟಿನಂತಹ ಉತ್ಪನ್ನಗಳಿಗೆ ಯುವಜನತೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಭಾರತದಲ್ಲಿ ಸುಮಾರು 26.7 ಕೋಟಿಗೂ ಅಧಿಕ ಜನ ತಂಬಾಕು ಬಳಕೆದಾರರಿದ್ದು, ಪ್ರತಿ ವರ್ಷ 13.5 ಲಕ್ಷಕ್ಕೂ ಹೆಚ್ಚು ಜನರು ತಂಬಾಕು ಸೇವನೆ ಸಂಬಂಧಿತ ಕಾಯಿಲೆಗಳಿಂದ ಸಾವಿಗೀಡಾಗಿದ್ದಾರೆ. ವಿಪರ್ಯಾಸವೆಂದರೇ ಶೇ.47.6 ರಷ್ಟು ತಂಬಾಕು ಬಳಕೆದಾರರು ಗ್ರಾಮೀಣ ಪ್ರದೇಶದವರಾಗಿದ್ದು, ಕರ್ನಾಟಕದಲ್ಲಿ ಶೇ.22.8 ರಷ್ಟು ವ್ಯಕ್ತಿಗಳು ಯಾವುದಾದರೊಂದು ರೀತಿಯ ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡುತ್ತಿದಾರೆ.

ಆರೋಗ್ಯಕರ ಜೀವನ ನಡೆಸುವ ನಿಟ್ಟಿನಲ್ಲಿ ಸಾರ್ವಜನಿಕರು ತಂಬಾಕು ಉತ್ಪನ್ನಗಳ ಕರಾಳ ಉದ್ದೇಶಗಳನ್ನು ಅರಿತುಕೊಳ್ಳಬೇಕು. ತಂಬಾಕು ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರ ಸಹಕಾರ ಬಹಳ ಮುಖ್ಯವಾಗಿದೆ. ತಂಬಾಕು ಬಳಕೆಯಿಂದ ಹೃದಯ ಸಂಬಂಧಿ ಹಾಗೂ ಕ್ಯಾನ್ಸರ್ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಬಾಯಿ, ರಕ್ತನಾಳಕ್ಕೆ ಹಾನಿ, ಕುತ್ತಿಗೆ ಮತ್ತು ಶಿರದ ಕ್ಯಾನ್ಸರ್, ಗಂಟಲು ಕ್ಯಾನ್ಸರ್, ಧ್ವನಿಪೆಟ್ಟಿಗೆ, ಮಿದುಳು, ಅನ್ನನಾಳ, ಶ್ವಾಸಕೋಶ, ಮೂತ್ರಪಿಂಡ, ಸ್ತನ ಕ್ಯಾನ್ಸರ್ ಸೇರಿದಂತೆ ದೇಹದ ವಿವಿಧ ಅಂಗಾಂಗಗಳಿಗೆ ಕ್ಯಾನ್ಸರ್‌ಗೆ ಕಾರಣವಾಗಲಿದೆ. ಸಾರ್ವಜನಿಕವಾಗಿ ತಂಬಾಕು ಸೇವೆನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸರ್ಕಾರ ಮತ್ತು ಸಂಘ-ಸಂಸ್ಥೆಗಳಿಂದ ಹೆಚ್ಚೆಚ್ಚು ಜಾಗೃತಿ ಮೂಡಿಸುವ ಕಾರ್ಯವಾಗಬೇಕಿದೆ ಎಂದರು.

ಅಪರ ಸಿವಿಲ್ ನ್ಯಾಯಾಧೀಶರಾದ ಶೃತಿ ತೇಲಿ ಅವರು ಮಾತನಾಡಿ, ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ತಂಬಾಕು ಮತ್ತು ಗುಟ್ಕಾ ಉತ್ಪನ್ನಗಳಿಗೆ ಅಕರ್ಷಣೀಯ ಜಾಹಿರಾತುಗಳು ಜನರನ್ನು ದಿಕ್ಕು ತಪ್ಪಿಸುತ್ತಿವೆ. ಚಿತ್ರನಟರೇ ಗುಟ್ಕಾ, ತಂಬಾಕು ಕಂಪನಿಗಳ ರಾಯಭಾರಿಯಾಗಿದ್ದಾರೆ. ಇದು ಸಾರ್ವಜನಿಕರ ಮೇಲೆ ತುಂಬಾ ಪ್ರಭಾವ ಮೂಡಿಸುತ್ತದೆ. ಮಹಿಳೆಯರು, ಮಕ್ಕಳು ತಂಬಾಕು, ಗುಟ್ಕಾದಂತಹ ದುಶ್ಚಟಗಳಿಗೆ ದಾಸರಾಗುತ್ತಿರುವುದು ಶೋಚನೀಯ.

ಇದಕ್ಕೂ ಮುನ್ನಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆವರಣದಿಂದ ವಿವಿಧ ಪ್ರಮುಖ ಬೀದಿಗಳಲ್ಲಿ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಜಾಗೃತಿ ಜಾಥಾ ನಡೆಸಲಾಯಿತು. ಇದೇ ವೇಳೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಂಕರನಾಯ್ಕ.ಎಲ್ ಮಾತನಾಡಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಧರ್ಮನಗೌಡರವರು ತಂಬಾಕು ನಿಯಂತ್ರಣ ಮಾಡುವಂತೆ ಪ್ರತಿಜ್ಞಾ ವಿಧಿ ಭೋದಿಸಿದರು.

ಜಾಥಾದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಅಧಿಕಾರಿ ಡಾ.ಭಾಸ್ಕರ್, ವೈದ್ಯಾಧಿಕಾರಿ ಡಾ.ವಿನೋದ ಕುಮಾರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ, ಜಿಲ್ಲಾ ಕುಷ್ಠರೋಗದ ನಿಯಂತ್ರಣ ಅಧಿಕಾರಿ ಡಾ.ರಾಧಿಕಾ, ತಾಲೂಕು ಆರೋಗ್ಯ ಅಧಿಕಾರಿ ಡಾ.ಬಸವರಾಜ, ತಂಬಾಕು ನಿಯಂತ್ರಣ ಕೋಶದ ಸಂಯೋಜಕ ಮಹಾಂತೇಶ್.ಬಿ. ಉಳ್ಳಾಗಡ್ಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ ಸೇರಿದಂತೆ ಶ್ರೀಸಪ್ತಗಿರಿ ವಿದ್ಯಾಲಯದ ನರ್ಸೀಂಗ್ ವಿದ್ಯಾರ್ಥಿಗಳು, ಟಿಎಂಎಇ ಸಂಸ್ಥೆಯ ನರ್ಸೀಂಗ್ ವಿದ್ಯಾರ್ಥಿಗಳು, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರ ವಿಶ್ವವಿದ್ಯಾಲಯ ಟ್ರಸ್ಟ್ನ ಪದಾಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande