ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಆರಂಭ
ದಾವಣಗೆರೆ, 1 ಜೂನ್ (ಹಿ.ಸ.): ಆ್ಯಂಕರ್: ಹೊರಗುತ್ತಿಗೆ ನೌಕರರು, ಕಾರ್ಮಿಕರಿಗೆ ವೇತನ ಪಾವತಿ ಮತ್ತು ಶಾಸನಾತ್ಮಕವಾಗಿ ನೀಡಬೇಕಾದ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ನೂತನವಾಗಿ ನಿಯೋಜಿತ ದಾವಣಗೆರೆ ಕಾರ್ಮಿಕರ ಕ್ಷೇಮಾಭಿವೃದ್ದಿ ಸಹಕಾರ ಸಂಘ ನಿಯಮಿತ., ದಾವಣಗೆರೆ ಸಂಘವನ್ನು ಪ್ರಾರಂಭಿಸಲ
ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಆರಂಭ


ದಾವಣಗೆರೆ, 1 ಜೂನ್ (ಹಿ.ಸ.):

ಆ್ಯಂಕರ್:

ಹೊರಗುತ್ತಿಗೆ ನೌಕರರು, ಕಾರ್ಮಿಕರಿಗೆ ವೇತನ ಪಾವತಿ ಮತ್ತು ಶಾಸನಾತ್ಮಕವಾಗಿ ನೀಡಬೇಕಾದ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ನೂತನವಾಗಿ ನಿಯೋಜಿತ ದಾವಣಗೆರೆ ಕಾರ್ಮಿಕರ ಕ್ಷೇಮಾಭಿವೃದ್ದಿ ಸಹಕಾರ ಸಂಘ ನಿಯಮಿತ., ದಾವಣಗೆರೆ ಸಂಘವನ್ನು ಪ್ರಾರಂಭಿಸಲಾಗಿದೆ.

ಸರ್ಕಾರದ ವಿವಿಧ ಇಲಾಖೆಗಳಲ್ಲಿ, ಇಲಾಖೆ ಅಧೀನದಲ್ಲಿ ಬರುವ ನಿಗಮ ಮಂಡಳಿ, ಸಂಸ್ಥೆಗಳಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ಅಂಕಿ ಅಂಶಗಳನ್ನು ಪಟ್ಟಿಮಾಡಿ ಮಾಹಿತಿ ಸಲ್ಲಿಸಿದ್ದಲ್ಲಿ ಸಂಘದಿಂದ ಸದಸ್ಯತ್ವ ಅರ್ಜಿಗಳನ್ನು ವಿತರಿಸಲಾಗುವುದು. ನಂತರ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಪ್ರಸ್ತಾವನೆಯನ್ನು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ, ಬಿ.ಎಸ್.ಎನ್.ಎಲ್ ಕಟ್ಟಡ, 2ನೇ ಮಹಡಿ, ದೇವರಾಜ್ ಅರಸ್ ಬಡಾವಣೆ, ದಾವಣಗೆರೆ ಇಲ್ಲಿಗೆ ಸಲ್ಲಿಸುವಂತೆ ದಾವಣಗೆರೆ ಕಾರ್ಮಿಕರ ಕ್ಷೇಮಾಭಿವೃದ್ದಿ ಸಹಕಾರ ಸಂಘ ನಿ., ಪ್ರವರ್ತಕರು ಹಾಗೂ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande