ಗದಗ, 10 ಜೂನ್ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ತೋಟಗಾರಿಕೆ ಬೆಳೆಗಾರರಿಗೆ 2025-2026 ನೇ ಸಾಲಿನ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಹಣ್ಣು, ತರಕಾರಿ, ಹೂವು. ವೈಯಕ್ತಿಕ ನೀರು ಸಂಗ್ರಹಣಾ ಘಟಕಗಳು, ಮಿನಿ ಟ್ರಾಕ್ಸಟರ್ 20ಎಚ್ ಪಿ ಕ್ಕಿಂತ ಕಡಿಮೆ ಸಾಮರ್ಥ್ಯ ಗೆ ಸಹಾಯಧನ ಒದಗಿಸಲಾಗುವುದು. ರಾಷ್ಟ್ರೀಯ ಕೃಷಿ ವಿಸ್ತರಣೆ ಮತ್ತು ತಂತ್ರಜ್ಞಾನ ಅಭಿಯಾನ ಯೋಜನೆಯಡಿ ಕೃಷಿ ಯಾಂತ್ರೀಕರಣ ಉಪಅಭಿಯಾನ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ಕೃಷಿ ಯಂತ್ರೋಪಕರಣ ಖರೀದಿಗೆ ಪ.ಜಾ, ಪ.ಪಂ ಸಣ್ಣ ರೈತರು ಮತ್ತು ರೈತ ಮಹಿಳೆಯರಿಗೆ ಶೇ.50 ಮತ್ತು ದೊಡ್ಡ ರೈತರಿಗೆ ಶೇ.40ರಷ್ಟು ಸಹಾಯಧನ ನೀಡಲಾಗುವುದು.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಎಲ್ಲ ರೈತರಿಗೆ ಗರಿಷ್ಠ 2 ಹೇ ಪ್ರದೇಶದ ವರೆಗೆ ಶೇ.90 ರ ಸಹಾಯಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಜೂನ್ 26 ಕೊನೆಯ ದಿನವಾಗಿರುತ್ತದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿ.ಪಂ ಶಿರಹಟ್ಟಿ ಶ್ರೀ ಎಮ್ ಎಮ್ ತಾಂಬೋಟಿ ರವರು ಪ್ರಕಟಣೆ ಮೂಲಕ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Lalita MP