`ವಿದ್ಯಾಧನ' ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ, 10 ಜೂನ್ (ಹಿ.ಸ.) : ಆ್ಯಂಕರ್ : ಸರೋಜಿನಿ ದಾಮೋದರನ್ ಪ್ರತಿಷ್ಠಾನವು 2024-2025ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾದ ಕರ್ನಾಟಕದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ವಿದ್ಯಾಧನ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು, ಅರ್ಜಿ ಸಲ್ಲಿಸಲು ಜುಲೈ 08, 2025ರಂದ
`ವಿದ್ಯಾಧನ' ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ


ಬಳ್ಳಾರಿ, 10 ಜೂನ್ (ಹಿ.ಸ.) :

ಆ್ಯಂಕರ್ : ಸರೋಜಿನಿ ದಾಮೋದರನ್ ಪ್ರತಿಷ್ಠಾನವು 2024-2025ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾದ ಕರ್ನಾಟಕದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ವಿದ್ಯಾಧನ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು, ಅರ್ಜಿ ಸಲ್ಲಿಸಲು ಜುಲೈ 08, 2025ರಂದು ಕೊನೆಯ ದಿನವಾಗಿದೆ.

ಸರೋಜಿನಿ ದಾಮೋದರನ್ ಪ್ರತಿಷ್ಠಾನದ ಸಂಯೋಜಕ ಜೆಸ್ವಿನ್‍ಟಾಂ, ಕಲ್ಯಾಣ ಕರ್ನಾಟಕ ವಿಕಾಸ ಅಕಾಡೆಮಿಯ ವಿಭಾಗ ಸಂಚಾಲಕ ಪ್ರಭುದೇವ ಕಪ್ಪಗಲ್ಲು, ನಗರ ಸಂಚಾಲಕ ವೆಂಕಟೇಶ ಬಡಿಗೇರ ಅವರು ಸುದ್ದಿಗಾರರಿಗೆ ಮಂಗಳವಾರ ಈ ಮಾಹಿತಿ ನೀಡಿದರು.

ಸರೋಜಿನಿ ದಾಮೋದರನ್ ಫೌಂಡೇಶನ್ (ಎಸ್‍ಡಿಎಫ್) ಕರ್ನಾಟಕದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪಿ.ಯು.ಸಿ ಪ್ರಥಮ ವರ್ಷದಿಂದ ಇಂಜಿನಿಯರಿಂಗ್, ವೈದ್ಯಕೀಯ ಸೇರಿ ವಿವಿಧ ಕೋರ್ಸ್‍ಗಳು ಸೇರಿ ಉನ್ನತ ಶಿಕ್ಷಣದವರೆಗೆ ವಿದ್ಯಾರ್ಥಿವೇತನ ನೀಡುತ್ತಿದೆ. ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಆ ನಂತರ, ಫೌಂಡೇಶನ್ ವಿದ್ಯಾರ್ಥಿಗಳಿಗಾಗಿ ಆನ್‍ಲೈನ್ ಪರೀಕ್ಷೆ, ಮನೆ ಭೇಟಿ ಸೇರಿ ಹಂತಗಳಲ್ಲಿ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಿದೆ ಎಂದರು.

ಎಸ್.ಡಿ.ಎಫ್ ಒಂದು ಲಾಭರಹಿತ ಸಂಸ್ಥೆ. ಸಹ-ಸ್ಥಾಪಕ, ಇನ್ಫೋಸಿಸ್‍ನ ಮಾಜಿ ಸಿ.ಇ.ಒ ಎಸ್.ಡಿ. ಶಿಬುಲಾಲ್ ಮತ್ತು ಕುಮಾರಿ ಶಿಬುಲಾಲ್ ಅವರು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅವಕಾಶಗಳನ್ನು ಒದಗಿಸುವ ಗುರಿಯೊಂದಿಗೆ ಸರೋಜಿನಿ ದಾಮೋದರನ್ ಫೌಂಡೇಶನ್ ಅನ್ನು ಪ್ರಾರಂಭಿಸಿದ್ದರು. ಈ ಸಂಸ್ಥೆಯು 2014ರಲ್ಲಿ ಕರ್ನಾಟಕದಲ್ಲಿ ಪ್ರಾರಂಭವಾಗಿ ಈವರೆಗೆ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೆರವಾಗಿದೆ.

ಕರ್ನಾಟಕ ಸೇರಿ ಕೇರಳ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಪುದುಚೇರಿ ಸೇರಿ 20 ರಾಜ್ಯಗಳಲ್ಲಿ 50,000 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಣೆ ಮಾಡುತ್ತಿದೆ. ವಿದ್ಯಾಧನ ವಿದ್ಯಾರ್ಥಿ ವೇತನ ನೀಡಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ, ಕೌಶಲ್ಯ ತರಬೇತಿ, ಮಾರ್ಗದರ್ಶನ ಮತ್ತು ವೃತ್ತಿಪರ ತರಬೇತಿಗಳನ್ನು ನೀಡಲಿದೆ ಎಂದರು.

ಅರ್ಜಿ ಸಲ್ಲಿಸಲು, ವಿದ್ಯಾರ್ಥಿಗಳು ವಾರ್ಷಿಕ ಆದಾಯ ರೂ 2.00 ಲಕ್ಷಕ್ಕಿಂತ ಕಡಿಮೆ ಇದ್ದು, ಎಸ್‍ಎಸ್‍ಎಲ್‍ಸಿಯಲ್ಲಿ ಶೇ. 90 ರಷ್ಟು ಅಂಕಗಳನ್ನು ಪಡೆದಿರಬೇಕು. ವಿಕಲಾಂಗ ವಿದ್ಯಾರ್ಥಿಗಳಿಗೆ ಶೇ. 75, ತಂದೆ ಅಥವಾ ತಾಯಿ ಇಲ್ಲದ ವಿದ್ಯಾರ್ಥಿ, ಇನ್ನಿತರೆ ವಿಶೇಷ ಪ್ರಕರಣಗಳನ್ನು ಸಂಸ್ಥೆ ಗಮನಿಸುತ್ತದೆ. ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದವರಿಗೆ ಪಿಯುಸಿಯಲ್ಲಿ ವರ್ಷಕ್ಕೆ 10,000 ರೂ, ನಂತರ ಪದವಿಯಲ್ಲಿ ವರ್ಷಕ್ಕೆ 15,000 ರಿಂದ 75,000ರೂ ತನಕ ವಿದ್ಯಾರ್ಥಿ ವೇತನವನ್ನು ಪಾವತಿಸಲಾಗುತ್ತದೆ ಎಂದರು.

ವಿವರಗಳಿಗಾಗಿ ವೆಬ್‍ಸೈಟ್ : www.vidyadhan.org, vidyadhan.karnataka@sdfoundationindia.com - ವಿದ್ಯಾಧನ ಸಹಾಯವಾಣಿ +91 8068333500 ವನ್ನು ಸಂಪರ್ಕಿಸಬಹುದು.

ಅಥವಾ ಜೆಸ್ವಿನ್ ಟಾಂ, ಕಾರ್ಯಕ್ರಮ ಸಂಯೋಜಕ, ಸರೋಜಿನಿ ದಾಮೋದರನ್ ಪ್ರತಿಷ್ಠಾನ, ದೂರವಾಣಿ: 9611896183 - ಪವಿತ್ರಾ, ಕಾರ್ಯಕ್ರಮ ಸಂಯೋಜಕಿ, ಸರೋಜಿನಿ ದಾಮೋದರನ್ ಪ್ರತಿಷ್ಠಾನ, ದೂರವಾಣಿ: 7349354415 ಅವರಿಗೆ ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande