ಬಳ್ಳಾರಿ, 10 ಜೂನ್ (ಹಿ.ಸ.) :
ಆ್ಯಂಕರ್ : ಒಣ ಮೆಣಸಿನಕಾಯಿಯ ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರ ಸಂಕಷ್ಟಕ್ಕೆ ನೆರವಾಗಲು ಸರ್ಕಾರ ಮೆಣಸಿನಕಾಯಿ ಬೆಳೆಗಾರರ ಸಾಲ ಮನ್ನಾ ಮಾಡಲು ಆಗ್ರಹಿಸಿ ಕನ್ನಡ ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯ ನೇತೃತ್ವವಹಿಸಿದ್ದ ಕನ್ನಡ ರೈತ ಸಂಘದ ಮೆಣಸಿನ ಈಶ್ವರಪ್ಪ ಅವರು, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆ ಸೇರಿ ಕರ್ನಾಟಕಾದ್ಯಂತ ಒಣ ಮೆಣಸಿನಕಾಯಿ ಬೆಳೆ ಬೆಳೆದ ರೈತರು ಬೆಲೆ ಕುಸಿತದ ಕಾರಣ ಆರ್ಥಿಕವಾಗಿ ತೀವ್ರ ನಷ್ಟಕ್ಕೊಳಗಾಗಿದ್ದಾರೆ. ಮೆಣಸಿನಕಾಯಿ ಬೆಳೆಯಲಿಕ್ಕಾಗಿ ಬ್ಯಾಂಕುಗಳು, ಸಹಕಾರಿ ಸಂಘಗಳು ಮತ್ತು ವಿವಿಧ ಹಣಕಾಸು ಸಂಸ್ಥೆಗಳಿಂದ ಪಡೆದಿರುವ ಸಾಲವನ್ನು ಸರ್ಕಾರ ಮನ್ನಾ ಮಾಡಬೇಕು ಎಂದು ಮನವಿ ಮಾಡಿದರು.
ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡು, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್