ತಾಯಿ, ಶಿಶು ಮರಣದಲ್ಲಿ ವೈದ್ಯರ ನಿರ್ಲಕ್ಷತನ ; ಶಿಸ್ತು ಕಾನೂನು ಕ್ರಮ : ಜಿಲ್ಲಾಧಿಕಾರಿ
ಹೊಸಪೇಟೆ , 10 ಜೂನ್ (ಹಿ.ಸ.) ಆ್ಯಂಕರ್: ಜಿಲ್ಲೆಯ ಯಾವುದೇ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ತಾಯಿ, ಶಿಶು ಮತ್ತು ಮಕ್ಕಳ ಮರಣದಲ್ಲಿ ವೈದ್ಯರ ನಿರ್ಲಕ್ಷ್ಯತನ ಬಗ್ಗೆ ವರದಿಯಾದರೇ ಅಂತಹ ವೈದ್ಯರ ವಿರುದ್ಧ ಎಫ್‍ಐಆರ್ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ವೈದ್ಯಾಧಿಕಾರಿಗಳಿಗೆ
ತಾಯಿ, ಶಿಶು ಮರಣದಲ್ಲಿ ವೈದ್ಯರ ನಿರ್ಲಕ್ಷತನ ಕಂಡರೆ ಶಿಸ್ತು ಕಾನೂನು ಕ್ರಮ.   ಜಿಲ್ಲಾಧಿಕಾರಿ


ತಾಯಿ, ಶಿಶು ಮರಣದಲ್ಲಿ ವೈದ್ಯರ ನಿರ್ಲಕ್ಷತನ ಕಂಡರೆ ಶಿಸ್ತು ಕಾನೂನು ಕ್ರಮ.   ಜಿಲ್ಲಾಧಿಕಾರಿ


ಹೊಸಪೇಟೆ , 10 ಜೂನ್ (ಹಿ.ಸ.)

ಆ್ಯಂಕರ್: ಜಿಲ್ಲೆಯ ಯಾವುದೇ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ತಾಯಿ, ಶಿಶು ಮತ್ತು ಮಕ್ಕಳ ಮರಣದಲ್ಲಿ ವೈದ್ಯರ ನಿರ್ಲಕ್ಷ್ಯತನ ಬಗ್ಗೆ ವರದಿಯಾದರೇ ಅಂತಹ ವೈದ್ಯರ ವಿರುದ್ಧ ಎಫ್‍ಐಆರ್ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ವೈದ್ಯಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಡಿಟಿಎಫ್‍ಐ, ದಡಾರ ಮತ್ತು ರುಬೇಲ್ಲಾ ನಿರ್ಮೂಲನ ಕಾರ್ಯಕ್ರಮದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಸೋಮವಾರ ಮಾತನಾಡಿದರು. ವೈದ್ಯರು ಶಸ್ತ್ರಚಿಕಿತ್ಸೆ ಮಾಡುವ ವೇಳೆಯಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು ಎಂದರು.

ಯಾವುದೇ ರೀತಿಯಿಂದ ನಿರ್ಲಕ್ಷತನ ತೋರದೆ ಶಸ್ತ್ರಚಿಕಿತ್ಸೆಯನ್ನು ನಡೆಸಬೇಕು. ಒಂದೊಂದು ಜೀವವು ಅಮೂಲ್ಯವಾಗಿದೆ ಆದ್ದರಿಂದ ರೋಗಿಗಳ ಬಗ್ಗೆ ವೈದ್ಯರು ವಿಶೇಷ ಕಾಳಜಿ ವಹಿಸಬೇಕಿದೆ. ಗರ್ಭಿಣಿ ಮತ್ತು ಬಾಣಂತಿಯರ ಸರಿಯಾದ ಸಮಯಕ್ಕೆ ತಪಾಸಣೆ ಮಾಡಿಸಬೇಕು ಹಾಗೂ ಪೌಷ್ಠಿಕಾಂಶಯುಕ್ತ ಆಹಾರವನ್ನು ಸೇವನೆ ಶಿಫಾರಸು ಮಾಡಬೇಕು ಎಂದು ಹೇಳಿದರು.

ಈ ವೇಳೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರ್ ನಾಯ್ಕ್.ಎಲ್.ಆರ್, ಆರ್‍ಸಿಎಚ್ ಅಧಿಕಾರಿ ಡಾ.ಜಂಬಯ್ಯ, ವೈದ್ಯಾಧಿಕಾರಿಗಳಾದ ಡಾ.ಹರಿಪ್ರಸಾದ್, ಡಾ.ಭಾಸ್ಕರ್, ಡಾ.ಷಣ್ಮುಖ ನಾಯ್ಕ, ಡಾ.ಸೋಮಶೇಖರ, ಡಾ.ಧರ್ಮನಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಸುಭದ್ರ, ಸೇರಿದಂತೆ ವಿವಿಧ ತಾಲೂಕಿನ ತಾಲೂಕು ಆರೋಗ್ಯ ಅಧಿಕಾರಿಗಳು, ವೈದ್ಯರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande