ರಾಯಚೂರು, 10 ಜೂನ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ನಾನಾ ತಾಲೂಕಿನ ಜೆಸ್ಕಾಂ ಉಪ ವಿಭಾಗಗಳ ಕಚೇರಿಯಲ್ಲಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವೃತ್ತದ ಅಧೀಕ್ಷಕ ಅಭಿಯಂತರರ ಅಧ್ಯಕ್ಷತೆಯಲ್ಲಿ ಜೂನ್ 23ರಿಂದ ಜೂನ್ 27ರವರೆಗೆ ಗ್ರಾಹಕರ ಕುಂದುಕೊರತೆ ಸಭೆ ಏರ್ಪಡಿಸಲಾಗಿದೆ.
ಜೂನ್ 23ರ ಬೆಳಿಗ್ಗೆ 11 ಗಂಟೆಗೆ ರಾಯಚೂರು ನಗರ ಉಪ ವಿಭಾಗ ಕಚೇರಿ 01, ಜೂನ್ 25ರ ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ಸಿಂಧನೂರು ಹಾಗೂ ಜೂನ್ 27ರ ಬೆಳಿಗ್ಗೆ 11ಗಂಟೆಗೆ ಮಸ್ಕಿಯಲ್ಲಿ ಗ್ರಾಹಕರ ಕುಂದುಕೊರತೆ ಸಭೆ ಹ್ಮಮಿಕೊಳ್ಳಲಾಗಿದ್ದು, ಗ್ರಾಹಕರು ಅಥವಾ ಸಾರ್ವಜನಿಕರು ತಮ್ಮ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಗ್ರಾಹಕರ ಕುಂದುಕೊರತೆ ಸಭೆಯಲ್ಲಿ ಪಾಲ್ಗೊಂಡು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್