ಪರಿಸರವನ್ನು ನಾವು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ : ಉಮಾ
ಗದಗ, 10 ಜೂನ್ (ಹಿ.ಸ.) : ಆ್ಯಂಕರ್ : ಪರಿಸರವನ್ನು ನಾವು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪಂಚಭೂತಗಳಲ್ಲೂ ದೇವರನ್ನು ಕಾಣುವ ಸಂಸ್ಕೃತಿ ನಮ್ಮದು. ತೆಂಗು, ಆಲದಮರ, ಬನ್ನಿ ಮರ ಇನ್ನಿತರ ಮರಗಳನ್ನು ದೈವ ಸ್ವರೂಪಿಯಾಗಿ ಕಂಡರೂ ಪರಿಸರವನ್ನು ನಾಶ ಮಾಡುವದನ್ನು ಬಿಟ್ಟಿಲ್ಲ ಎಂದು ಶ್ರೀಕ್ಷೇತ್ರ
ಪೋಟೋ


ಗದಗ, 10 ಜೂನ್ (ಹಿ.ಸ.) :

ಆ್ಯಂಕರ್ : ಪರಿಸರವನ್ನು ನಾವು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪಂಚಭೂತಗಳಲ್ಲೂ ದೇವರನ್ನು ಕಾಣುವ ಸಂಸ್ಕೃತಿ ನಮ್ಮದು. ತೆಂಗು, ಆಲದಮರ, ಬನ್ನಿ ಮರ ಇನ್ನಿತರ ಮರಗಳನ್ನು ದೈವ ಸ್ವರೂಪಿಯಾಗಿ ಕಂಡರೂ ಪರಿಸರವನ್ನು ನಾಶ ಮಾಡುವದನ್ನು ಬಿಟ್ಟಿಲ್ಲ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಾ ಯೋಜನಾಧಿಕಾರಿ ಉಮಾ ಎನ್.ಜಿ ಹೇಳಿದರು.

ಗದಗ ನಗರದ ಶಿವಾನಂದ ನಗರ ಕಾರ್ಯಕ್ಷೇತ್ರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ರಸ್ತೆಗಳ ಅಗಲೀಕರಣ, ಕೆರೆಗಳ ಮುಚ್ಚುವಿಕೆ, ಕಾಡಿನ ನಾಶ ಇದೇ ರೀತಿ ಮುಂದುವರೆದರೆ ಪ್ರಾಣಿ ಸಂಕುಲ ಮನುಷ್ಯ ಸಂಕುಲದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದನ್ನು ತಪ್ಪಿಸಬೇಕಾದರೆ ಗಿಡಗಳನ್ನು ನೆಟ್ಟು ಸಂರಕ್ಷಣೆ ಮಾಡುವದು ಅಗತ್ಯವಾಗಿದೆ ಎಂದು ಹೇಳಿದರು.

ಹಿರಿಯ ಸಾಹಿತಿ ಹಾತಲಗೇರಿಯ ಮಲ್ಲಿಕಾರ್ಜುನ ಪೂಜಾರ ಮಾತನಾಡಿ, ವಿಶ್ವ ಪರಿಸರ ದಿನವು ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕಲು ಮತ್ತು ಜಾಗತಿಕ ತಾಪಮಾನ ಏರಿಕೆಯ ವಿರುದ್ಧ ಹೋರಾಡುವ ಅಗತ್ಯವನ್ನು ನಮಗೆ ಕಲಿಸುತ್ತದೆ ಎಂದು ಹೇಳಿದರು.

ಶಾಲೆಯ ಮುಖ್ಯ ಶಿಕ್ಷಕ ಎಂ.ಎಂ. ಜೋಗಿನ ಮಾತನಾಡಿ, ಈ ದಿನವನ್ನು ಸಸಿ ನೆಟ್ಟು ಆಚರಿಸುವುದು ಜಾಗತಿಕವಾಗಿ ಇರುವ ವಾಡಿಕೆಯಾಗಿದೆ. ಆದರೆ ಇದರ ಹೊರತಾಗಿ ಪರಿಸರಕ್ಕೆ ಅಥವಾ ಭೂಮಿಗೆ ಸವಾಲಾಗಿರುವ ಹವಾಮಾನ ಬದಲಾವಣೆ, ಪ್ಲಾಸ್ಟಿಕ್‌ನಂತಹ ಗಂಭೀರ ಸಮಸ್ಯೆಗಳ ಬಗ್ಗೆ ನಾವು ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸುಷ್ಮಾ, ಕೃಷಿ ಮೇಲ್ವಿಚಾರಕ ಕಿರಣ ಮಹೇಂದ್ರಕರ, ಸಹ ಶಿಕ್ಷಕರು. ಒಕ್ಕೂಟದ ಉಪಾಧ್ಯಕ್ಷರಾದ ದ್ಯಾಮವ್ವ ವಡ್ಡರ ಮುಂತಾದವರು ಉಪಸ್ಥಿತರಿದ್ದರು. ಪರಿಸರ ಪೂರಕ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande