ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಇಲ್ಲ : ಎನ್ಎಸ್ ಬೋಸರಾಜು
ಮಾನ್ವಿ, , 10 ಜೂನ್ (ಹಿ.ಸ.) : ಆ್ಯಂಕರ್ : ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಇಲ್ಲ. ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಮುಗಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು. ಕಾಮಗಾರಿಗಳ ನಿರ್ವಹಣೆಯಲ್ಲಿ ಕಳಪೆ ಅಥವಾ ಲೋಪ ಕಂಡುಬಂದರೆ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎನ್ ಎಸ್
ಕಾಮಗಾರಿಗಳ ಗುಣಮಟ್ಟದಲ್ಲಿ ನೋ ಕಾಂಪ್ರಮೈಸ್ : ಎನ್ಎಸ್ ಬೋಸರಾಜು


ಕಾಮಗಾರಿಗಳ ಗುಣಮಟ್ಟದಲ್ಲಿ ನೋ ಕಾಂಪ್ರಮೈಸ್ : ಎನ್ಎಸ್ ಬೋಸರಾಜು


ಮಾನ್ವಿ, , 10 ಜೂನ್ (ಹಿ.ಸ.) :

ಆ್ಯಂಕರ್ : ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಇಲ್ಲ. ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಮುಗಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು. ಕಾಮಗಾರಿಗಳ ನಿರ್ವಹಣೆಯಲ್ಲಿ ಕಳಪೆ ಅಥವಾ ಲೋಪ ಕಂಡುಬಂದರೆ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎನ್ ಎಸ್ ಬೋಸರಾಜು ಹಾಗೂ ಶಾಸಕ ಹಂಪಯ್ಯ ನಾಯಕ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಮಾನ್ವಿ ಪ್ರವಾಸಿ ಮಂದಿರದಲ್ಲಿ ಮಾನ್ವಿ ಹಾಗೂ ಸಿರವಾರ ತಾಲೂಕಿನ ನಿರ್ಮಿತಿ ಕೇಂದ್ರ , ಕ್ಯಾಶ್ಯುಟೆಕ್, ಕೆಆರ್ ಡಿಎಲ್, ಲೋಕೋಪಯೋಗಿ ಇಲಾಖೆ, ಪಂಚಾಯ್ತಿ ರಾಜ್ಯ ಇಲಾಖೆ, ಲ್ಯಾಂಡ್ ಆರ್ಮಿ, ಅಮೃತ-2 ಕುಡಿಯುವ ನೀರಿನ ಯೋಜನೆ ಸೇರಿ ಇಲಾಖೆ, ಎಜೆಸ್ಸಿಗಳ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾಹಿತಿ ಪಡೆದರು.

ಪಿಡಬ್ಲ್ಯೂಡಿ ಸೇರಿ ಎಜೆನ್ಸಿಗಳಿಂದ ನಡೆಯುತ್ತಿರುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾಮಗಾರಿ ಕೆಲಸಗಳನ್ನು ಗುಣಮಟ್ಟದೊಂದಿಗೆ ತ್ವರಿತ ಗತಿಯಲ್ಲಿ ಮುಗಿಸಬೇಕೆಂದು ತಿಳಿಸಿದರು.

ಸಭೆಯಲ್ಲಿ ಸರಿಯಾಗಿ ಮಾಹಿತಿ ನೀಡದ ಅಧಿಕಾರಿಗಳಿಗೆ ಮಾತನಾಡಿ, ನಿಮಗೆ ಕೆಲಸದ ಮೇಲೆ ಜವಾಬ್ದಾರಿಯಿಲ್ಲ ಜವಾಬ್ದಾರಿಯಿದ್ದರೆ ಕೆಲಸಗಳು ಈಗಾಗಲೆ ಮುಗಿಯುತ್ತಿದ್ದವು ಎಂದು ತರಾಟೆಗೆ ತೆಗೆದುಕೊಂಡು ಗುಣಮಟ್ಟದೊಂದಿಗೆ ತ್ವರಿತಗತಿಯಲ್ಲಿ ಕಾಮಗಾರಿ ನಿರ್ವಹಿಸುವಂತೆ ಸೂಚನೆ ನೀಡಿದರು.

ಮಳೆ ಗಾಳಿಯ ವಾತವಾರಣ ಪ್ರಾರಂಭವಾಗಿರುವದರಿಂದ ಜೆಸ್ಕಾಂ ಇಲಾಖೆಯ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮ ವಹಿಸಬೇಕು. ವಿದ್ಯುತ್ ವ್ಯತ್ಯಯವಾಗದಂತೆ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕೆಂದು ಜೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು

ಪುರಸಭೆ ಅಧಿಕಾರಿ ಸಿಬ್ಬಂದಿಗಳೊಂದಿಗೆ ಮಾತನಾಡಿ ನೀರಿಗೆ ತೊಂದರೆಯಾಗದಂತೆ ಕೆಲಸ ಮಾಡುವಂತೆ ಸೂಚಿಸಿ. ಪಟ್ಟಣದಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳು ನಿರ್ವಹಿಸುವ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸಾರ್ವಜನಿಕರು ಸ್ಪಂದಿಸಬೇಕು ಎಂದು ತಿಳಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಇಇ ವೆಂಕಟೇಶ ಗಲಗ್, ಸಿರವಾರ ತಹಶೀಲ್ದಾರರಾದ ರವಿ ಅಂಗಡಿ, ತಹಶೀಲ್ದಾರ್ ಭೀಮರಾಯ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ದೊಡ್ಡಮನಿ, ಸಿರವಾರ ತಾಲೂಕ ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಸ್ವಾಮಿ, ಜಿಲ್ಲಾ ಕೌಷಲ್ಯಾಭಿವೃದ್ಧಿ ಅಧಿಕಾರಿಗಳು ಜಿ ಯು ಉಡೇದ್, ಕಾಂಗ್ರೆಸ್ ಹಿರಿಯ ಮುಖಂಡರಾದ ಬಿಕೆ ಅಮರೇಪ್ಪ, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಗಫೂರ ಸಾಬ್, ಕೆ. ಶಾಂತಪ್ಪ, ಪುರಸಭೆ ಅಧ್ಯಕ್ಷರು ವೀರೇಶ, ಉಪಾಧ್ಯಕ್ಷರು, ಪುರಸಭೆ ಸದಸ್ಯರುಗಳು ಸೇರಿದಂತೆ ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande