ಕೊಪ್ಪಳ, 10 ಜೂನ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ವಿಭಾಗೀಯ ಅಂಚೆ ಕಚೇರಿ ವತಿಯಿಂದ ಅಂಚೆ ಇಲಾಖೆ ಮೂಲಕ ಪಿಂಚಣಿ ಪಡೆಯುವ ಪಿಂಚಣಿದಾರರ ಅಹವಾಲು, ದೂರು ಸ್ವೀಕಾರಕ್ಕಾಗಿ ಜೂನ್ 26 ರಂದು ವಿಭಾಗೀಯ ಅಂಚೆ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಂಚೆ ಮೂಲಕ ಪಿಂಚಣಿ ಪಡೆಯುವ ಪಿಂಚಣಿದಾರರು, ಅವಲಂಬಿತರು ಪಿಂಚಣಿ ಅದಾಲತ್ನಲ್ಲಿ ಭಾಗವಹಿಸಲು ತಮ್ಮ ದೂರು, ಅಹವಾಲುಗಳನ್ನು ಅಂಚೆ ಮೂಲಕ ಅಂಚೆ ಅಧೀಕ್ಷಕರ ಕಚೇರಿ, ಕೊಪ್ಪಳ ವಿಭಾಗ, ಕೊಪ್ಪಳ-583231 ವಿಳಾಸಕ್ಕೆ ಜೂನ್ 21 ರೊಳಗೆ ಸಲ್ಲಿಸಬೇಕು ಎಂದು ಕೊಪ್ಪಳ ವಿಭಾಗೀಯ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್