ಬೆಂಗಳೂರು, 10 ಜೂನ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿಯಾಗಿ ನವದೆಹಲಿ ವಿಮಾನ ಹತ್ತಿರುವ ಸಿದ್ದರಾಮಯ್ಯನವರು ಮಾಜಿ ಮುಖ್ಯಮಂತ್ರಿಗಳಾಗಿ ವಾಪಸ್ಸು ಬರುತ್ತಾರಾ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ವ್ಯಂಗ್ಯವಾಡಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಟೀಕಿಸಿದ್ದಾರೆ.
ಕಾಲ್ತುಳಿತ ಕೊಲೆ ಪ್ರಕರಣಕ್ಕೆ ನೇರ ಹೊಣೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಪಡೆಯುವ ತಾಕತ್ತು ರಾಹುಲ್ ಗಾಂಧಿಯವರಿಗೆ ಇದೆಯಾ ಎಂದು ಪ್ರಶ್ನಿಸಿ ದ್ದಾರೆ.
ಐಪಿಎಲ್ ವಿಜಯೋತ್ಸವಕ್ಕೆ ಎಲ್ಲರೂ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬನ್ನಿ ಎಂದು ಬಹಿರಂಗ ಆಹ್ವಾನ ಕೊಟ್ಟ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕಾಲ್ತುಳಿತ ಕೊಲೆ ಪ್ರಕರಣಕ್ಕೆ ಹೊಣೆ ಮಾಡಿ ರಾಜೀನಾಮೆ ಪಡೆಯುವ ಶಕ್ತಿ ಎಐಸಿಸಿ ಅಧ್ಯಕ್ಷರಾದ ಖರ್ಗೆ ಅವರಿಗೆ ಇದೆಯಾ? ಎಂದು ಪ್ರಶ್ನಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa