ಕಂಪ್ಲಿ, 11 ಜೂನ್ (ಹಿ.ಸ.) :
ಆ್ಯಂಕರ್ : ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ಜನ್ಮದಿನದ ಅಂಗವಾಗಿ ಕಂಪ್ಲಿ ತಾಲೂಕಿನ ನಂ. 10 ಮುದ್ದಾಪುರ ಗ್ರಾಮ ಪಂಚಾಯಿತಿಯ ಯಲ್ಲಮ್ಮ ಕ್ಯಾಂಪ್ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ಲೇಖನೆಗಳನ್ನು ವಿತರಿಸಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆಯ ಕಂಪ್ಲಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಬಳೆ ಮಲ್ಲಿಕಾರ್ಜುನ ಅವರು, ಕನ್ನಡ ಭಾಷೆ, ನಾಡು, ನುಡಿ, ಜಲ ಸಂರಕ್ಷಣೆಗಾಗಿ ಟಿ.ಎ. ನಾರಾಯಣಗೌಡ ಅವರು ಹಗಲಿರುಳು ಶ್ರಮಿಸಿತ್ತಾ ಕನ್ನಡ ಭಾಷೆಗೆ ಧಕ್ಕೆ ಉಂಟಾದಲ್ಲಿ ರಾಜ್ಯ ವ್ಯಾಪಿ ಹೋರಾಟಗಳನ್ನು ಹಮ್ಮಿಕೊಳ್ಳುವ ಮೂಲಕ ಸರ್ಕಾರಗಳನ್ನು ಎಚ್ಚರಗೊಳಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಗಂಗಾವತಿಯ ನವ ಜೀವನ ವೃದ್ಧಾಶ್ರಮದಲ್ಲಿ ಅನ್ನ ಸಂರ್ಪಣೆಯನ್ನು ಸಹ ನಡೆಸಲಾಗಿದೆ ಎಂದರು.
ಸಂಘದ ಗೌರವ ಅಧ್ಯಕ್ಷ ಬಿ ವಿ ಗೌಡ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಎಂ.ಎಸ್. ಮುನ್ನ, ನಗರ ಘಟಕದ ಅಧ್ಯಕ್ಷ ಜಂಗ ನಾಗರಾಜ, ಉಪಾಧ್ಯಕ್ಷ ಹೂಗಾರ್ ಗಣೇಶ್, ಪ್ರಾಮುಖರಾದ ಜಿ. ವೀರನಗೌಡ, ವೀರೇಶ್, ಬಸವರಾಜ್, ಮಂಜುನಾಥ, ಪ್ರವೀಣ್, ಯಲ್ಲಪ್ಪ ಸೇರಿ ಇತರರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್