ಕಲಬುರಗಿ, 11 ಜೂನ್ (ಹಿ.ಸ.) :
ಆ್ಯಂಕರ್ : ಕಲಬುರಗಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಇಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ಅವರ ನಿಧನ ಹಿನ್ನಲೆ ಕಾಂಗ್ರೆಸ್ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು.
ಜಿಲ್ಲಾ ಕಾಂಗ್ರೆಸ್ ಕಮಿಟಿ ವತಿಯಿಂದ ನಗರದ ಕಾಂಗ್ರೆಸ್ ಕಚೇರಿಯಲ್ಲಿ ದಿವಂಗತರಾದ ವಿಧಾನ ಪರಿಷತ್ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೌನಾಚಾರಣೆ ನೆರವೇರಿಸುವ ಮೂಲಕ ಅಗಲಿದ ನಾಯಕನಿಗೆ ಕಾಂಗ್ರೆಸ್ ಮುಖಂಡರು ಸಂತಾಪ ವ್ಯಕ್ತಪಡಿಸಿದರು.
ಈ ವೇಳ ಮಾತನಾಡಿದ ಕಾಂಗ್ರೆಸ್ ಮುಖಂಡ ಮಹಾಂತಪ್ಪ ಸಂಗಾವಿ ಅವರು, ಡೇವಿಡ್ ಸಿಮಿಯೋನ್ ಅವರು ವಿಧಾನ ಪರಿಷತ್ ಸಭಾಪತಿಯಾಗಿ ಅನೇಕ ಜನಪರ ಕಾರ್ಯಗಳನ್ನು ಮಾಡಿದ್ದಾರೆ ಅವರ ಅಗಲಿಕೆ ನಿಜಕ್ಕೂ ನೋವುಂಟು ಮಾಡಿದೆ ಎಂದು ಕಂಬನಿ ಮಾಡಿದರು.
ಬಳಿಕ ಮಾತನಾಡಿದ ರಾಜಗೋಪಾಲ ರೆಡ್ಡಿ, ಅವರು ಡೇವಿಡ್ ಸಿಮಿಯೋನ್ ಸಾವು ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯಕ್ಕೆ ತುಂಬಲಾಗದ ನಷ್ಟ, ದೇವರ ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸಿದು.
ಈ ಸಂಧರ್ಭದಲ್ಲಿ ಮುಖಂಡರಾದ ಸಂಧ್ಯಾರಾಜು, ಧರ್ಮರಾಜ್ ಹೇರೂರ, ಈರಣ್ಣ ಝಳಕಿ,ಶಫಿಕ್ ಅಹ್ಮದ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Samarth biral