ಬೆಂಗಳೂರು/ಕಲಬುರಗಿ, 11 ಜೂನ್ (ಹಿ.ಸ.):
ಆ್ಯಂಕರ್ : ಕಾಂಗ್ರೆಸ್ ಪಕ್ಷವನ್ನು ಇಬ್ಬಾಗ ಮಾಡಲು ಕೇಂದ್ರ ಸರಕಾರ ಇಡಿ ದಾಳಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಬಳ್ಳಾರಿ ಕಾಂಗ್ರೆಸ್ ಸಂಸದ ತುಕಾರಾಮ ಹಾಗೂ ಶಾಸಕರ ಮೇಲಿನ ದಾಳಿ ಖಂಡಿಸಿರುವ ಅವರು, ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದ ಮೇಲೆ ಸಿಟ್ಟಿದೆ, ಹೀಗಾಗಿ ಕಾಂಗ್ರೆಸ್ ಶಾಸಕರನ್ನು ಗುರಿಯಾಗಿಸಿ ಮಾಡಿ ದಾಳಿ ಮಾಡಲಾಗುತ್ತಿದೆ. ಇಡಿ ದಾಳಿ ಮೂಲಕ ಕಿರುಕುಳ ನೀಡಿ ಕಾಂಗ್ರೆಸ್ ಪಕ್ಷವನ್ನು ಇಬ್ಭಾಗ ಮಾಡಬೇಕೆಂಬ ಉದ್ದೇಶ ಇರಬೇಕು. ಆದರೆ ಅದು ಸಾಧ್ಯವಿಲ್ಲದ ಮಾತು ಎಂದರು.
ಯಾವ ಕಾರಣಕ್ಕೆ ದಾಳಿ ನಡೆಸಲಾಗಿದೆ ಎನ್ನುವುದು ಇಡಿ ಅಧಿಕಾರಿಗಳುಗೆ ಗೊತ್ತು. ಇಡಿ ಅಧಿಕಾರಿಗಳ ದಾಳಿ ಇದೇನು ಹೊಸದಲ್ಲ ಎಂದು ಖರ್ಗೆ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa