ಬಳ್ಳಾರಿ, 11 ಜೂನ್ (ಹಿ.ಸ.) :
ಆ್ಯಂಕರ್ : ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಮಾಜಿ ಸೈನಿಕರಿಂದ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಧಾರವಾಡದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ನಾಗರಿಕ ರಕ್ಷಣಾ ವ್ಯವಸ್ಥೆಯು ಸ್ವಯಂಸೇವಾ ಮಾದರಿಯಾಗಿದ್ದು, ಇತ್ತೀಚೆಗೆ ಭಾರತದ 400 ಜಿಲ್ಲೆಗಳಲ್ಲಿ ರಾಷ್ಟ್ರವ್ಯಾಪಿ ನಾಗರಿಕ ರಕ್ಷಣಾ ಅಣಕು ಕವಾಯತು ನಡೆಸಲಾಗಿತ್ತು. ಪ್ರಸ್ತುತ ಭಾರತದ 244 ವಿವಿದ ಜಿಲ್ಲೆಗಳಲ್ಲಿ ಈ ವ್ಯವಸ್ಥೆಯು ಅಸ್ತಿತ್ವದಲ್ಲಿದ್ದು, ಯುದ್ಧ ಹಾಗೂ ಶಾಂತಿಯ ಸಂದರ್ಭದಲ್ಲಿ ಇದರ ಜವಾಬ್ದಾರಿ ನಿರ್ದಿಷ್ಠಪಡಿಸಲಾಗಿದೆ.
ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಧಾರವಾಡ ದ ವ್ಯಾಪ್ತಿಯಲ್ಲಿರುವ ಧಾರವಾಡ, ಗದಗ, ಹಾವೇರಿ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿರುವ ಮಾಜಿ ಸೈನಿಕರು (ಓoಟಿ ಖeseಡಿve ಐisಣ) ಸ್ವಯಂಪ್ರೇರಿತವಾಗಿ ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಬಹುದಾಗಿದೆ.
ನೋಂದಾಯಿಸಿಕೊಳ್ಳಲು ಆನ್ಲೈನ್ ವೆಬ್ಸೈಟ್ www.civildefencewarriors.gov.in ಗೆ ಭೇಟಿ ನೀಡಬಹುದು. ಮಾಜಿ ಸೈನಿಕರು ನೋಂದಣಿಯ ಮಾಹಿತಿಯನ್ನು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಧಾರವಾಡ, ಇವರ ಇ-ಮೇಲ್ sainikwelfaredwd@gmail.com ಅಥವಾ ದೂ.08362440176 ಗೆ ಸಂಪರ್ಕಿಸಿ ಮಾಹಿತಿ ನೀಡಬಹುದು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್