ಶಾಸಕ ಜನಾರ್ದನ ರೆಡ್ಡಿ ಜೈಲುವಾಸಕ್ಕೆ ತಾತ್ಕಾಲಿಕ ತಡೆ ; ಬೆಂಬಲಿಗರಲ್ಲಿ ಹರ್ಷ
ಹೈದರಾಬಾದ್/ಬಳ್ಳಾರಿ, 11 ಜೂನ್ (ಹಿ.ಸ.) : ಆ್ಯಂಕರ್ : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಲಯದಲ್ಲಿ ಶಿಕ್ಷಿತರಾಗಿದ್ದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸೇರಿ ಅವರ ಜೊತೆ ಜೈಲು ಸೇರಿದವರಿಗೆ ತೆಲಂಗಾಣ ಹೈಕೋರ್ಟ್ ಷರತ್ತುಬದ್ಧವಾದ ತಾತ್ಕಾಲಿಕ ತಡೆಯ
ಶಾಸಕ ಜನಾರ್ದನರೆಡ್ಡಿ ಜೈಲುವಾಸಕ್ಕೆ ತಾತ್ಕಾಲಿಕ ತಡೆ, ಷರತ್ತುಬದ್ಧ ಜಾಮೀನು ; ಬೆಂಬಲಿಗರಲ್ಲಿ ಹರ್ಷ


ಹೈದರಾಬಾದ್/ಬಳ್ಳಾರಿ, 11 ಜೂನ್ (ಹಿ.ಸ.) :

ಆ್ಯಂಕರ್ : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಲಯದಲ್ಲಿ ಶಿಕ್ಷಿತರಾಗಿದ್ದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸೇರಿ ಅವರ ಜೊತೆ ಜೈಲು ಸೇರಿದವರಿಗೆ ತೆಲಂಗಾಣ ಹೈಕೋರ್ಟ್ ಷರತ್ತುಬದ್ಧವಾದ ತಾತ್ಕಾಲಿಕ ತಡೆಯಾಜ್ಞೆಯನ್ನು ನೀಡಿ, ಷರತ್ತುಬದ್ಧ ಜಾಮೀನು ನೀಡಿದೆ.

ವಿಶೇಷ ಸಿಬಿಐ ನ್ಯಾಯಾಲಯ ಇತ್ತೀಚೆಗೆ ವಿಧಿಸಿದ್ದ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಈ ಹಂತದಲ್ಲಿ ಜಾರಿಗೊಳಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿ, ಶಾಸಕ ಜಿ. ಜನಾರ್ದನ ರೆಡ್ಡಿ ಅವರಿಗೆ ಷರತ್ತುಬದ್ಧ ಜಾಮೀನನ್ನೂ ಜಾರಿ ಮಾಡಿದೆ.

ತಲಾ 10 ಲಕ್ಷ ಮೌಲ್ಯದ ಇಬ್ಬರು ಶ್ಯೂರಿಟಿ ನೀಡಬೇಕು. ಭಾರತ ಬಿಟ್ಟು ಹೊರ ಹೋಗಲು ಅನುಮತಿ ಇರುವುದಿಲ್ಲ. ಅಲ್ಲದೇ, ಗಾಲಿ ಜನಾರ್ದನ ರೆಡ್ಡಿ ಅವರ ಪಾಸ್‍ಪೆÇೀರ್ಟ್ ಅನ್ನು ಪೊಲೀಸರಿಗೆ ಒಪ್ಪಿಸಬೇಕು ಎಂದು ಷರತ್ತುಗಳನ್ನು ವಿಧಿಸಿದೆ.

ಕಳೆದ ತಿಂಗಳು (ಮೇ 6) ಓಬಳಾಪುರಂ ಮೈನಿಂಗ್ ಕಂಪನಿಗೆ ಸಂಬಂಧಿಸಿದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯವು ಅಂತಿಮ ತೀರ್ಪು ನೀಡಿ, ಏಳು ವರ್ಷಗಳ ಕಾಲ ಶಿಕ್ಷೆ ವಿಧಿಸಿತ್ತು.

ಜನಾರ್ದನರೆಡ್ಡಿ ಅವರ ಜೊತೆಯಲ್ಲಿ ಜೈಲು ಸೇರಿದ್ದ ಬಿ.ವಿ. ಶ್ರೀನಿವಾಸ್‍ರೆಡ್ಡಿ, ನಿವೃತ್ತ ಅಧಿಕಾರಿ ವಿ.ಡಿ. ರಾಜಗೋಪಾಲ್ ಮತ್ತು ರೆಡ್ಡಿ ಅವರ ಆಪ್ತ ಸಹಾಯಕ ಅಲಿ ಖಾನ್ ಕೂಡ ತಪ್ಪಿತಸ್ತರೂ ಕೂಡ ಈ ಆದೇಶದ ವ್ಯಾಪ್ತಿಯಲ್ಲಿ ಬರಲಿದ್ದಾರೆ ಎಂದು ಹೇಳಲಾಗಿದೆ.

ಈ ಅರ್ಜಿಯ ವಾದಗಳನ್ನು ಮಂಗಳವಾರ ಆಲಿಸಿದ್ದ ಕೋರ್ಟ್ ಆದೇಶವನ್ನು ಬುಧವಾರಕ್ಕೆ ಕಾಯ್ದಿರಿಸಿತ್ತು. ನ್ಯಾಯಮೂರ್ತಿ ಕೆ. ಲಕ್ಷ್ಮಣ್ ಅವರು ಸಿಬಿಐ ನ್ಯಾಯಾಲಯದ ತೀರ್ಪನ್ನು ತಾತ್ಕಾಲಿಕವಾಗಿ ತಡೆಹಿಡಿದು ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು ನೀಡಿ ತೀರ್ಪು ನೀಡಿದ್ದಾರೆ. ಆದರೆ, ವಿಶೇಷ ಸಿಬಿಐ ನ್ಯಾಯಾಲಯ ವಕೀಲರು ಶೀಘ್ರದಲ್ಲೇ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ.

`ಸಂಭ್ರಮೋತ್ಸವ'

ಶಾಸಕ ಜಿ. ಜನಾರ್ದನ ರೆಡ್ಡಿ ಅವರ ಶಿಕ್ಷೆಯ ತೀರ್ಪಿಗೆ ತಾತ್ಕಾಲಿಕ ತಡೆಯಾಜ್ಞೆಯನ್ನು ತೆಲಂಗಾಣ ಹೈಕೋರ್ಟ್ ಆದೇಶ ನೀಡಿ, ಷರತ್ತುಬದ್ಧ ಜಾಮೀನು ನೀಡುತ್ತಿದ್ದಂತೆಯೇ ಅವರ ಬಳ್ಳಾರಿ ಮತ್ತು ಗಂಗಾವತಿಯಲ್ಲಿರುವ ಅವರ ಹಿಂಬಾಲಕರು - ಬೆಂಬಲಿಗರಲ್ಲಿ ಹರ್ಷೋದ್ಘಾರ ಉಂಟಾಗಿ, ಬಳ್ಳಾರಿಯ ಗಡಿಗೆ ಚನ್ನಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande