ಬಳ್ಳಾರಿ, 11 ಜೂನ್ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ವಾರಾಚರಣೆ ನಿಮಿತ್ತವಾಗಿ ಅಸೋಸಿಯೇಷನ್ ಆಫ್ ಸರ್ಜನ್ಸ್ ಆಫ್ ಇಂಡಿಯಾ - ಬಳ್ಳಾರಿ ಶಾಖೆ ವತಿಯಿಂದ ಜೂ.15 ರ ವರೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಳ್ಳಾರಿ ಶಾಖೆ ಅಧ್ಯಕ್ಷ ಡಾ.ಶೇಕಪ್ಪ ಮಾಳಗಿಮನಿ ಮತ್ತು ಕಾರ್ಯದರ್ಶಿ ಡಾ.ಗುಡೇಕೋಟೆ ರವಿಕುಮಾರ ಅವರು ತಿಳಿಸಿದ್ದಾರೆ.
ಜೂ.11 ರಂದು ಸಸಿ ನೆಡುವ ಕಾರ್ಯಕ್ರಮ, ಜೂ.12 ರಂದು ಬೀದಿ ನಾಟಕ(ಸಾಮಾಜಿಕ ಕಳಕಳಿ), ಜೂ.13 ರಂದು ಉಚಿತ ತಪಾಸಣೆ, ಶಸ್ತ್ರಚಿಕಿತ್ಸೆ (ನಗರದ ನುರಿತ ವೈದ್ಯರಿಂದ ತಮ್ಮ ಆಸ್ಪತ್ರೆಗಳಲ್ಲಿ ತಮ್ಮ ವೈಯಕ್ತಿಕ ಸಾಮಥ್ರ್ಯಕ್ಕನುಸಾರ ಅರ್ಹ ರೋಗಿಗಳಿಗೆ), ಜೂ.14 ರಂದು ಬೃಹತ್ ರಕ್ತದಾನ ಶಿಬಿರ (ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಪ್ರಾಂಗಣ) ಮತ್ತು ಜೂ.15 ರಂದು ರಾಷ್ಟ್ರೀಯ ಶಸ್ತ್ರಚಿಕಿತ್ಸಾ ದಿನಾಚರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮಗಳಲ್ಲಿ ಬಿಎಂಸಿಆರ್ಸಿ ಯ ನಿರ್ದೇಶಕ ಡಾ.ಗಂಗಾಧರ ಗೌಡ, ಎಎಸ್ಐ ನ ರಾಷ್ಟ್ರೀಯ ಕಾರ್ಯದರ್ಶಿ ಡಾ.ಗಡ್ಡಿ ದಿವಾಕರ, ಕೆಎಸ್ಸಿಎಎಸ್ಐ ಖಜಾಂಚಿ ಡಾ.ವೈ.ಗುರುಬಸವನ ಗೌಡ, ಬಿಎಂಸಿಆರ್ಸಿ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಕಾಸಾ ಸೋಮಶೇಖರ್ ಹಾಗೂ ಶಸ್ತ್ರಚಿಕಿತ್ಸಾ ವಿಭಾಗದ ಸಿಬ್ಬಂದಿಗಳು, ಸೂಪರ್ ಸ್ಪೆಷಾಲಿಟಿ ವೈದ್ಯರುಗಳು ಮತ್ತು ನಗರದ ನುರಿತ ಶಸ್ತ್ರಚಿಕಿತ್ಸಾ ತಜ್ಞರುಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸುವರು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್