ಕೊಚ್ಚಿ, 11 ಜೂನ್ (ಹಿ.ಸ.) :
ಆ್ಯಂಕರ್ : ಕಳೆದ ವರ್ಷ ಕೇರಳದ ವಯನಾಡು ಲೋಕಸಭಾ ಉಪಚುನಾವಣೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆಯ್ಕೆ ಆಗಿದ್ದಾರೆ. ಅವರ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಕೇರಳ ಉಚ್ಚ ನ್ಯಾಯಾಲಯ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ಕೇಳಿ ನೋಟಿಸ್ ಜಾರಿ ಮಾಡಿದೆ.
ನ್ಯಾಯಮೂರ್ತಿ ಕೆ ಬಾಬು ಪ್ರಿಯಾಂಕಾ ಗಾಂಧಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಕಳೆದ ಲೋಕಸಭಾ ಉಪಚುನಾವಣೆಯಲ್ಲಿ ವಾದ್ರಾ ವಿರುದ್ಧ ಸ್ಪರ್ಧಿಸಿ ಸೋತಿದ್ದ ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್, ಪ್ರಿಯಾಂಕಾ ಗಾಂಧಿ ಆಯ್ಕೆ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಮತ್ತು ಅವರ ಕುಟುಂಬದ ಆಸ್ತಿಯನ್ನು ನಾಮಪತ್ರದಲ್ಲಿ ಸರಿಯಾಗಿ ಬಹಿರಂಗಪಡಿಸಿಲ್ಲ. ಮಾದರಿ ನೀತಿ ಸಂಹಿತೆಗೆ ವಿರುದ್ಧವಾಗಿ ಹಾಗೂ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಅರ್ಜಿ ಪರಿಶೀಲಿಸಿದ ನ್ಯಾಯಾಲಯ ಈ ಮನವಿಯನ್ನು ಅಂಗೀಕರಿಸಿದ್ದು, ಈ ವಿಷಯದಲ್ಲಿ ತಮ್ಮ ನಿಲುವು ತಿಳಿಸುವಂತೆ ಕಾಂಗ್ರೆಸ್ ನಾಯಕಿಗೆ ನೋಟಿಸ್ ನೀಡಲಾಗಿದೆ. ಮುಂದಿನ ವಿಚಾರಣೆ ಆಗಸ್ಟ್ನಲ್ಲಿ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa