ಕೋಲಾರ, ೧೧ ಜೂನ್ (ಹಿ.ಸ) :
ಆ್ಯಂಕರ್ : ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಕಳುವಾಗಿದ್ದ ಹಾಗೂ ಸಿಇಐಆರ್ ತಂತ್ರಾ0ಶದಲ್ಲಿ ದೂರು ದಾಖಲಾಗಿದ್ದ ೨೪ ಮೊಬೈಲ್ ಪೋನ್ಗಳನ್ನು ಸಿಇಎನ್ ಅಪರಾಧ ಪೊಲೀಸ್ ಠಾಣಿಯ ಪೊಲೀಸರು ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರ ಮಾಡಿದ್ದಾರೆ.
ಸಿಇಎನ್ ಅಪರಾಧ ಪೊಲೀಸ್ ಠಾಣೆ ವತಿಯಿಂದ ಸಿಇಐಆರ್ ಪೋರ್ಟಲ್ ಕೇಂದ್ರೀಯ ಸಲಕರಣೆಗಳ ಗುರುತಿನ ನೋಂದಣಿಯಲ್ಲಿ ದಾಖಲಾಗಿದ್ದ ಮೊಬೈಲ್ ಪೋನ್ ಕಳವು ಬಗ್ಗೆ ತನಿಖೆ ಹಾಗೂ ವಿಶೇಷ ಕಾರ್ಯಾಚರಣೆ ನಡೆಸಿ ದೇಶದ ವಿವಿಧ ರಾಜ್ಯಗಳಲ್ಲಿ ಇದ್ದಂತಹ ೨೪ ಕಳವು ಮೊಬೈಲ್ಗಳನ್ನು ಪತ್ತೆ ಮಾಡಿ, ವಾರಸುದಾರರನ್ನು ಬರಮಾಡಿಕೊಂಡು, ಅವರವರ ಮೊಬೈಲ್ ಪೋನ್ಗಳನ್ನು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾ0ತರಾಜು ಅವರ ಸಮಕ್ಷಮ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾ0ತರಾಜು ಅವರು ಮಾತನಾಡಿ, ಯಾರೇ ಆಗಲಿ ಮೊಬೈಲ್ ಪೋನ್ಗಳನ್ನು ಕಳೆದುಕೊಂಡಲ್ಲಿ ಕೂಡಲೇ ಸಿ.ಇ.ಐ.ಆರ್. ಪೋರ್ಟಲ್ನಲ್ಲಿ ದೂರನ್ನು ದಾಖಲಿಸುವಂತೆ ಕರೆ ನೀಡಿದರು. ಇದರಿಂದಾಗಿ ಕಳುವಾದ ಮೊಬೈಲ್ ಪೋನ್ಗಳು ಪತ್ತೆಯಾಗುವುದಲ್ಲದೇ, ಬೇರೆಯವರು ದುರ್ಬಳಕೆ ಮಾಡಿಕೊಳ್ಳುವುದನ್ನು ತಪ್ಪಿಸಬಹುದೆಂದು ಈ ಕುರಿತು ಅಗತ್ಯ ತಿಳುವಳಿಕೆಗಳನ್ನು ನೀಡಿ ಅರಿವು ಮೂಡಿಸಿದರು.
ಇಪ್ಪತ್ತನಾಲ್ಕು ಕಳವು ಮೊಬೈಲ್ಗಳನ್ನು ಪತ್ತೆ ಮಾಡಿ, ವಾರಸುದಾರರಿಗೆ ಹಸ್ತಾಂತರಿಸುವಲ್ಲಿ ಯಶಸ್ವಿಯಾದ ಸಿಇಎನ್ ಪಿಐ ಲಕ್ಷ್ಮಿನಾರಾಯಣ ಮತ್ತು ಸಿಬ್ಬಂದಿ ಮಣಿಕಂಠ ಅವರ ಕಾರ್ಯವೈಖರಿಯನ್ನು ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.
ಡಿವೈಎಸ್ಪಿ ಎಸ್.ಪಾಂಡುರ0ಗ ಮತ್ತು ಸಿಇಎನ್ ಇನ್ಸ್ಪೆಕ್ಟರ್ ಲಕ್ಷ್ಮಿನಾರಾಯಣ, ಅವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಚಿತ್ರ : ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಕಳುವಾಗಿದ್ದ ಮೊಬೈಲ್ ಪೋನ್ಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಚಿತ್ರದಲ್ಲಿ ಎಸ್ಪಿ ಕೆ.ಎಂ.ಶಾ0ತರಾಜು, ಡಿವೈಎಸ್ಪಿ ಎಸ್.ಪಾಂಡುರ0ಗ ಮತ್ತು ಸಿಇಎನ್ ಇನ್ಸ್ಪೆಕ್ಟರ್ ಲಕ್ಷ್ಮಿನಾರಾಯಣ ಇದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್