ಬಳ್ಳಾರಿ, 11 ಜೂನ್ (ಹಿ.ಸ.) :
ಆ್ಯಂಕರ್ : ಅನುಸೂಚಿತ ಜಾತಿ/ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995ರ ನಿಯಮ 17 ರ ರಿತ್ಯಾ ಉಪವಿಭಾಗ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿಯನ್ನು ಪುನರ್ ರಚನೆ ಮಾಡಲು ನಾಮ ನಿರ್ದೇಶಿತ ಸದಸ್ಯರನ್ನು ಆಯ್ಕೆ ಮಾಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸಿರುವ ವ್ಯಕ್ತಿಗಳು/ಸಂಸ್ಥೆಗಳ ಅಧಿಕಾರೇತರ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ-01, ಪರಿಶಿಷ್ಟ ಪಂಗಡ-01 ಸೇರಿ ಒಟ್ಟು-02 ಸದಸ್ಯರನ್ನು ಹಾಗೂ ಇತರೆ ವರ್ಗದ 02 ಎನ್.ಜಿ.ಓ ಅಧಿಕಾರೇತರ ಸದಸ್ಯರನ್ನು ನೇಮಕ ಮಾಡಲಾಗುವುದು.
ಆಸಕ್ತಿಯುಳ್ಳವರು ಜೂನ್ 15 ರೊಳಗಾಗಿ ನಗರದ ಕೌಲ್ ಬಜಾರ್ 1ನೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್