ಕಲಬುರಗಿ, 11 ಜೂನ್ (ಹಿ.ಸ.) :
ಆ್ಯಂಕರ್ : ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಸ್ಕೂಲ್ ಕಾಲೇಜು ಆಫ್ ನರ್ಸಿಂಗ್ ಸಂಸ್ಥೆಯ ಕಾಲೇಜಿಗೆ ಕರ್ನಾಟಕ ಬ್ಯಾಂಕ್ ವತಿಯಿಂದ ಶಾಲೆ, ಕಾಲೇಜು ವಾಹನ ಕೊಡುಗೆ ನೀಡಿದ್ದು, ವಾಹನಕ್ಕೆ ಬುಧವಾರ ಚಾಲನೆ ನೀಡಲಾಯಿತು.
ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಅವರು ಹಸಿರು ಧ್ವಜ ತೋರಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಹಲವು ವರ್ಷಗಳಿಂದ ಶೈಕ್ಷಣಿಕ ಕ್ರಾಂತಿ ನಡೆಸಿದೆ. ಅಸಂಖ್ಯಾತ ವಿದ್ಯಾರ್ಥಿಗಳು ಸಂಸ್ಥೆಯಲ್ಲಿ ಶಿಕ್ಷಣ ಪಡೆದು ಉನ್ನತ ಹುದ್ದೆರಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಿಗೆ ಸಹಕಾರವಾಗಲಿ ಎಂದು ಕರ್ನಾಟಕ ಬ್ಯಾಂಕ್ ಬಸ್ ಕೊಡುಗೆಯಾಗಿ ನೀಡಿರುವುದು ಸಂತಸದ ಸಂಗತಿ. ಕರ್ನಾಟಕ ಬ್ಯಾಂಕ್ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸುವೆ ಎಂದರು.
ನಂತರ ಮಾತನಾಡಿದ ಕಾಲೇಜು ಡೀನ್ ಡಾ.ಪೂರ್ಣಿಮಾ ಅವರು, ವಿದ್ಯಾರ್ಥಿಗಳಿಗೆ ಸಹಕಾರವಾಗಲಿ ಎಂಬ ನಿಟ್ಟಿನಲ್ಲಿ ಕರ್ನಾಟಕ ಬ್ಯಾಂಕ್ 56ಸೀಟ್'ಗಳ ಬಸ್ ಕೊಡುಗೆಯಾಗಿ ನೀಡಿದ್ದು ಸಂತೋಷದ ಸಂಗತಿ. ಇದರಿಂದ ವಿದ್ಯಾರ್ಥಿಗಳಿಗೆ ತುಂಬ ಸಹಕಾರವಾಗಲಿದೆ ಎಂದು ಹೇಳಿದರು.
ಸಮಾರಂಭದಲ್ಲಿ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ರಾಜಾ ಬಿ ಭಿಮಳ್ಳಿ, ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ. ಕೈಲಾಶ ಬಿ ಪಾಟೀಲ್, ಸ್ಕೂಲ್, ಕಾಲೇಜು ಆಫ್ ನರ್ಸಿಂಗ್ನ ಸಂಚಾಲಕರಾದ ಡಾ. ನಾಗೇಂದ್ರ ಮಂಠಾಳೆ ಹಾಗೂ ಆಡಳಿತ ಮಂಡಳಿ ಸದಸ್ಯರಾದ ಅರುಣಕುಮಾರ್ ಪಾಟೀಲ, ಡಾ. ರಜಿನಿಶ್ ವಾಲಿ, ಡಾ. ಮಹದೇವಪ್ಪ ರಾಂಪುರೆ, ಡಾ. ಶರಣಬಸಪ್ಪ ಹರವಾಳ, ಸಾಯಿನಾಥ ಪಾಟೀಲ್, ಡಾ. ಅನಿಲಕುಮಾರ ನ ಪಟ್ಟಣ, ಅನಿಲಕುಮಾರ ಸೋಮಶೇಖರ್ ಮರಗೋಳ, ಡಾ. ಕಿರಣ್ ದೇಶಮುಖ, ನಾಗಣ್ಣ ಘಂಟಿ, ನಿಶಾಂತ ಎಲಿ, ಡಾ. ಗುರುಲಿಂಗಪ್ಪ ಪಾಟೀಲ್, ಪ್ರಾಂಶುಪಾಲರಾದ ಡಾ.ಮಹಾದೇವಪ್ಪ ಗೋಧಿ, ಚೇತನ್ ಸಜ್ಜನ ಉಪಸ್ಥಿತರಿದ್ದರು..
ಹಿಂದೂಸ್ತಾನ್ ಸಮಾಚಾರ್ / Samarth biral