ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕೋಶಕ್ಕೆ ಅರ್ಜಿ ಆಹ್ವಾನ
ರಾಯಚೂರು, 12 ಜೂನ್ (ಹಿ.ಸ.) : ಆ್ಯಂಕರ್ : ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಿರುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕೋಶದಲ್ಲಿ ಕಾರ್ಯನಿರ್ವಹಿಸಲು ಗುತ್ತಿಗೆ ಆಧಾರದ ಮೇಲೆ ನಿವೃತ್ತ ಸರಕಾರಿ ಅಧಿಕಾರಿಗಳನ್ನು ನೇಮಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜ
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕೋಶಕ್ಕೆ ಅರ್ಜಿ ಆಹ್ವಾನ


ರಾಯಚೂರು, 12 ಜೂನ್ (ಹಿ.ಸ.) :

ಆ್ಯಂಕರ್ : ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಿರುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕೋಶದಲ್ಲಿ ಕಾರ್ಯನಿರ್ವಹಿಸಲು ಗುತ್ತಿಗೆ ಆಧಾರದ ಮೇಲೆ ನಿವೃತ್ತ ಸರಕಾರಿ ಅಧಿಕಾರಿಗಳನ್ನು ನೇಮಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಯೋಜನೆಗಳ ಕಾರ್ಯಾನುಷ್ಠಾನಕ್ಕೆ ಸಹಕಾರಿಯಾಗಲು ಆಡಳಿತ ಹಿತದೃಷ್ಠಿಯಿಂದ ಜಿಲ್ಲೆಗೆ ಒಂದರಂತೆ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಮುಖ್ಯ ಕಾರ್ಯನಿರ್ವಹಾಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಕಚೇರಿ ಒಳಗೊಂಡಂತೆ ಜಿಲ್ಲೆಯಲ್ಲಿ ಒಂದು ಕೋಶವನ್ನು ಸ್ಥಾಪಿಸಿ ನಿವೃತ್ತ ಸರಕಾರಿ ಅಧಿಕಾರಿಗಳ ಸೇವೆಯನ್ನು ಪಡೆದುಕೊಳ್ಳಲು ಮಂಡಳಿಯಿಂದ ಅನುಮತಿ ನೀಡಿರುವುದರಿಂದ ಆಸಕ್ತಿಯುಳ್ಳ ನಿವೃತ್ತ ಸರಕಾರಿ ಅಧಿಕಾರಿಗಳು ಜೂನ್ 17ರೊಳಗಾಗಿ ಜಿಲ್ಲಾಧಿಕಾರಿಗಳ ರಾಯಚೂರು ಅವರ ಕಚೇರಿಯ ಕ.ಕ.ಪ್ರ.ಅ ಮಂಡಳಿಯ ಕೋಶದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande