ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನಕ್ಕೆ ಅರ್ಜಿ ಆಹ್ವಾನ
ರಾಯಚೂರು, 12 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಜಾನಪದ ಅಕಾಡೆಮಿಯು 2024ನೇ ಸಾಲಿನಲ್ಲಿ 2024ರ ಜನವರಿ 1ರಿಂದ 2024ರ ಡಿಸೆಂಬರ್ 31ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವಂತೆ ನಾಲ್ಕು ಪ್ರಕ
ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನಕ್ಕೆ ಅರ್ಜಿ ಆಹ್ವಾನ


ರಾಯಚೂರು, 12 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಜಾನಪದ ಅಕಾಡೆಮಿಯು 2024ನೇ ಸಾಲಿನಲ್ಲಿ 2024ರ ಜನವರಿ 1ರಿಂದ 2024ರ ಡಿಸೆಂಬರ್ 31ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವಂತೆ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಜನಪದ ಗದ್ಯ, ಜನಪದ ವಿಚಾರ-ವಿಮರ್ಶೆ ಸಂಶೋಧನೆ, ಜನಪದ ಪದ್ಯ, ಜನಪದ ಸಂಕೀರ್ಣ ಪ್ರಕಾರಗಳಿಗೆ ಆಸಕ್ತ ಲೇಖಕರು/ ಪ್ರಕಾಶಕರು/ ಸಂಪಾದಕರು ತಮ್ಮ 1 ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರಿಗೆ ಜೂನ್ 30ರೊಳಗೆ ತಲುಪುವಂತೆ ಖುದ್ದಾಗಿ ಕೋರಿಯರ್ ಅಥವಾ ಅಂಚೆ ಮೂಲಕ ಕಳುಹಿಸಬಹುದಾಗಿದೆ.

ಈ ಪುಸ್ತಕವು ತಜ್ಞರಿಂದ ಪ್ರಕಾರವಾರು ಆಯ್ಕೆಯಾದಲ್ಲಿ, ನಂತರ ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಉಳಿದಂತೆ 03 ಪ್ರತಿಗಳನ್ನು ಮೌಲ್ಯಮಾಪಕರ ಪರಿಶೀಲನೆಗೆ ತರಿಸಿಕೊಳ್ಳಲಾಗುವುದು.

ವಿಶೇಷ ಸೂಚನೆ: ಈಗಾಗಲೇ ಪುಸ್ತಕ ಬಹುಮಾನ ಪಡೆದ ಸಂಪಾದಕರು ಅಥವಾ ಲೇಖಕರು ಮತ್ತೆ ಪುಸ್ತಕ ಬಹುಮಾನ ಯೋಜನೆಗೆ ಕೃತಿಗಳನ್ನು ಕಳುಹಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande